ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ೧ ರಿಂದ ೫ ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಬೆಳಕುಯೋಜನೆಯ ದರವನ್ನು ಬೆಸ್ಕಾಂ ಮಾದರಿಯಲ್ಲಿ ಎಸ್ಕಾಂಗಳಿಗೂ ನೀಡಬೇಕು. ಕಾಮಗಾರಿ ನಿರ್ವಹಿಸುವ ಬಿಲ್ಗಳಿಗೆ ತ್ವರಿತವಾಗಿ ಹಣಕಾಸು ಮಂಜೂರು ಮಾಡಬೇಕು. ಶೀಘ್ರ ವಿದ್ಯುತ್ ಯೋಜನೆಯಲ್ಲಿ ಕಳೆದ ಒಂದು ವರ್ಷದಿಂದ ಅನುದಾನ ನೀಡದೆ ರೈತರ ಕೃಷಿ ಪಂಪ್ಸೆಟ್ಗಳಿಗೆ ತೊಂದರೆಯಾಗಿದ್ದು, ಪ್ರತಿಭಟನೆ ವೇಳೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಅನಧಿಕೃತ ಬಡಾವಣೆಗಳಿಗೆ ಅಭಿವೃದ್ದಿ ಶುಲ್ಕ ನೆಪದಲ್ಲಿ ಹೆಚ್ಚುವರಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದ್ದು ಹಿಂದಿನ ಆದೇಶದಂತೆ ಹಣ ಸಂಗ್ರಹಿಸಬೇಕು. ಎಲ್ಲಾ ಎಸ್ಕಾಂಗಳಲ್ಲಿ ಏಕರೂಪ ನೀತಿಯಲ್ಲಿ ಕೆಇಆರ್ಸಿ ನಿಯಮ ಪಾಲಿಸಬೇಕು. ಕ್ಲಾಸ್-೨ ನಿಂದ ಕ್ಲಾಸ್-೧ಗೆ ಏರಿಸಲು ಅನುಭವದ ಆಧಾರ ಮೇಲೆ ಲೈಸನ್ಸ್ ನೀಡಬೇಕು. ಸರ್ವರ್ ಮತ್ತು ಮೀಟರ್ಗಳ ಸಮಸ್ಯೆಯನ್ನು ಬಗೆಹರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಉಪಾಧ್ಯಕ್ಷ ಅನ್ಸರ್ ಅಲಿಖಾನ್, ಖಜಾಂಚಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ತಾಲ್ಲೂಕು ಸಹ ಕಾರ್ಯದರ್ಶಿ ಕಿರಗಸೂರು ಬಸವಣ್ಣ, ಮಹದೇವು ಹಾಜರಿದ್ದರು.
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…