ಜಿಲ್ಲೆಗಳು

ಡಿ.5ರಂದು ವಿದ್ಯುತ್ ಗುತ್ತಿಗೆದಾರರಿಂದ ಅನಿರ್ದಿಷ್ಟ ಮುಷ್ಕರ

ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ೧ ರಿಂದ ೫ ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಬೆಳಕುಯೋಜನೆಯ ದರವನ್ನು ಬೆಸ್ಕಾಂ ಮಾದರಿಯಲ್ಲಿ ಎಸ್ಕಾಂಗಳಿಗೂ ನೀಡಬೇಕು. ಕಾಮಗಾರಿ ನಿರ್ವಹಿಸುವ ಬಿಲ್‌ಗಳಿಗೆ ತ್ವರಿತವಾಗಿ ಹಣಕಾಸು ಮಂಜೂರು ಮಾಡಬೇಕು. ಶೀಘ್ರ ವಿದ್ಯುತ್ ಯೋಜನೆಯಲ್ಲಿ ಕಳೆದ ಒಂದು ವರ್ಷದಿಂದ ಅನುದಾನ ನೀಡದೆ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ತೊಂದರೆಯಾಗಿದ್ದು, ಪ್ರತಿಭಟನೆ ವೇಳೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಅನಧಿಕೃತ ಬಡಾವಣೆಗಳಿಗೆ ಅಭಿವೃದ್ದಿ ಶುಲ್ಕ ನೆಪದಲ್ಲಿ ಹೆಚ್ಚುವರಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದ್ದು ಹಿಂದಿನ ಆದೇಶದಂತೆ ಹಣ ಸಂಗ್ರಹಿಸಬೇಕು. ಎಲ್ಲಾ ಎಸ್ಕಾಂಗಳಲ್ಲಿ ಏಕರೂಪ ನೀತಿಯಲ್ಲಿ ಕೆಇಆರ್‌ಸಿ ನಿಯಮ ಪಾಲಿಸಬೇಕು. ಕ್ಲಾಸ್-೨ ನಿಂದ ಕ್ಲಾಸ್-೧ಗೆ ಏರಿಸಲು ಅನುಭವದ ಆಧಾರ ಮೇಲೆ ಲೈಸನ್ಸ್ ನೀಡಬೇಕು. ಸರ್ವರ್ ಮತ್ತು ಮೀಟರ್‌ಗಳ ಸಮಸ್ಯೆಯನ್ನು ಬಗೆಹರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಉಪಾಧ್ಯಕ್ಷ ಅನ್ಸರ್ ಅಲಿಖಾನ್, ಖಜಾಂಚಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ತಾಲ್ಲೂಕು ಸಹ ಕಾರ್ಯದರ್ಶಿ ಕಿರಗಸೂರು ಬಸವಣ್ಣ, ಮಹದೇವು ಹಾಜರಿದ್ದರು.

andolanait

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

26 mins ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

1 hour ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

1 hour ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

1 hour ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago