ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ೧ ರಿಂದ ೫ ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಬೆಳಕುಯೋಜನೆಯ ದರವನ್ನು ಬೆಸ್ಕಾಂ ಮಾದರಿಯಲ್ಲಿ ಎಸ್ಕಾಂಗಳಿಗೂ ನೀಡಬೇಕು. ಕಾಮಗಾರಿ ನಿರ್ವಹಿಸುವ ಬಿಲ್ಗಳಿಗೆ ತ್ವರಿತವಾಗಿ ಹಣಕಾಸು ಮಂಜೂರು ಮಾಡಬೇಕು. ಶೀಘ್ರ ವಿದ್ಯುತ್ ಯೋಜನೆಯಲ್ಲಿ ಕಳೆದ ಒಂದು ವರ್ಷದಿಂದ ಅನುದಾನ ನೀಡದೆ ರೈತರ ಕೃಷಿ ಪಂಪ್ಸೆಟ್ಗಳಿಗೆ ತೊಂದರೆಯಾಗಿದ್ದು, ಪ್ರತಿಭಟನೆ ವೇಳೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಅನಧಿಕೃತ ಬಡಾವಣೆಗಳಿಗೆ ಅಭಿವೃದ್ದಿ ಶುಲ್ಕ ನೆಪದಲ್ಲಿ ಹೆಚ್ಚುವರಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದ್ದು ಹಿಂದಿನ ಆದೇಶದಂತೆ ಹಣ ಸಂಗ್ರಹಿಸಬೇಕು. ಎಲ್ಲಾ ಎಸ್ಕಾಂಗಳಲ್ಲಿ ಏಕರೂಪ ನೀತಿಯಲ್ಲಿ ಕೆಇಆರ್ಸಿ ನಿಯಮ ಪಾಲಿಸಬೇಕು. ಕ್ಲಾಸ್-೨ ನಿಂದ ಕ್ಲಾಸ್-೧ಗೆ ಏರಿಸಲು ಅನುಭವದ ಆಧಾರ ಮೇಲೆ ಲೈಸನ್ಸ್ ನೀಡಬೇಕು. ಸರ್ವರ್ ಮತ್ತು ಮೀಟರ್ಗಳ ಸಮಸ್ಯೆಯನ್ನು ಬಗೆಹರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಉಪಾಧ್ಯಕ್ಷ ಅನ್ಸರ್ ಅಲಿಖಾನ್, ಖಜಾಂಚಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ತಾಲ್ಲೂಕು ಸಹ ಕಾರ್ಯದರ್ಶಿ ಕಿರಗಸೂರು ಬಸವಣ್ಣ, ಮಹದೇವು ಹಾಜರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…