ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ೧ ರಿಂದ ೫ ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಬೆಳಕುಯೋಜನೆಯ ದರವನ್ನು ಬೆಸ್ಕಾಂ ಮಾದರಿಯಲ್ಲಿ ಎಸ್ಕಾಂಗಳಿಗೂ ನೀಡಬೇಕು. ಕಾಮಗಾರಿ ನಿರ್ವಹಿಸುವ ಬಿಲ್ಗಳಿಗೆ ತ್ವರಿತವಾಗಿ ಹಣಕಾಸು ಮಂಜೂರು ಮಾಡಬೇಕು. ಶೀಘ್ರ ವಿದ್ಯುತ್ ಯೋಜನೆಯಲ್ಲಿ ಕಳೆದ ಒಂದು ವರ್ಷದಿಂದ ಅನುದಾನ ನೀಡದೆ ರೈತರ ಕೃಷಿ ಪಂಪ್ಸೆಟ್ಗಳಿಗೆ ತೊಂದರೆಯಾಗಿದ್ದು, ಪ್ರತಿಭಟನೆ ವೇಳೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಅನಧಿಕೃತ ಬಡಾವಣೆಗಳಿಗೆ ಅಭಿವೃದ್ದಿ ಶುಲ್ಕ ನೆಪದಲ್ಲಿ ಹೆಚ್ಚುವರಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದ್ದು ಹಿಂದಿನ ಆದೇಶದಂತೆ ಹಣ ಸಂಗ್ರಹಿಸಬೇಕು. ಎಲ್ಲಾ ಎಸ್ಕಾಂಗಳಲ್ಲಿ ಏಕರೂಪ ನೀತಿಯಲ್ಲಿ ಕೆಇಆರ್ಸಿ ನಿಯಮ ಪಾಲಿಸಬೇಕು. ಕ್ಲಾಸ್-೨ ನಿಂದ ಕ್ಲಾಸ್-೧ಗೆ ಏರಿಸಲು ಅನುಭವದ ಆಧಾರ ಮೇಲೆ ಲೈಸನ್ಸ್ ನೀಡಬೇಕು. ಸರ್ವರ್ ಮತ್ತು ಮೀಟರ್ಗಳ ಸಮಸ್ಯೆಯನ್ನು ಬಗೆಹರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಉಪಾಧ್ಯಕ್ಷ ಅನ್ಸರ್ ಅಲಿಖಾನ್, ಖಜಾಂಚಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ತಾಲ್ಲೂಕು ಸಹ ಕಾರ್ಯದರ್ಶಿ ಕಿರಗಸೂರು ಬಸವಣ್ಣ, ಮಹದೇವು ಹಾಜರಿದ್ದರು.
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…