ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ
ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕಬ್ಬು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಪ್ರತಿ ಟನ್ ಕಬ್ಬಿಗೆ ೪೫೦೦ ರೂ., ಲೀಟರ್ ಹಾಲಿಗೆ ೪೦ ರೂ. ದರ ಸೇರಿದಂತೆ ರೈತರ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಮೂರ್ನಾಲ್ಕು ದಿನಗಳ ಹಿಂದೆ ರೈತ ಸಂಘದ ಕರೆ ಮೇರೆಗೆ ಮಂಡ್ಯ ನಗರ ಬಂದ್ ಕೂಡ ಯಶಸ್ವಿಯಾಗಿದೆ. ಇಷ್ಟಾಗಿಯೂ ಸರ್ಕಾರಗಳು ರೈತರ ಮನವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಹೋರಾಟದ ರೂಪ ಬದಲಿಸಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಬೆಳಗಾವಿಯಲ್ಲಿ ನಡೆುಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ರೈತರ ಸಮಸ್ಯೆ ಮತ್ತು ಕಬ್ಬಿನ ದರ ನಿಗದಿ ವಿಚಾರವಾಗಿ ಮಾತನಾಡದಿರುವುದು ಖಂಡನೀಯ. ರೈತರ ಹೋರಾಟದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಜಾ.ದಳ, ಕಾಂಗ್ರೆಸ್ ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಹೋಗಿ ಮಾತನಾಡುವುದನ್ನು ಬಿಟ್ಟು, ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಭತ್ತದ ಬೆಳೆಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಕಾನೂನು ಬದ್ಧಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮಂಡ್ಯ ಬಂದ್ಗೆ ಸಹಕರಿಸಿದ ವಿದ್ಯಾರ್ಥಿಗಳು, ವರ್ತಕರು, ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ವಾಲೀಕರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಎಲ್ಲರಿಗೂ ರೈತಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.
ರೈತಸಂಘದ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಚಿದಾನಂದ, ದಯಾನಂದ, ಚಂದ್ರು, ವೆಂಕಟೇಶ್, ಎಂ.ವಿ.ಜಗದೀಶ್, ವಿಜಯಕುಮಾರ್, ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…