ಜಿಲ್ಲೆಗಳು

ಅಮಿತಾ ಶಾಗೆ ಕಪ್ಪು ಬಾವುಟ ಪ್ರದರ್ಶಿಸಲು ನಿರ್ಧಾರ

ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ

ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕಬ್ಬು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಪ್ರತಿ ಟನ್ ಕಬ್ಬಿಗೆ ೪೫೦೦ ರೂ., ಲೀಟರ್ ಹಾಲಿಗೆ ೪೦ ರೂ. ದರ ಸೇರಿದಂತೆ ರೈತರ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಮೂರ್ನಾಲ್ಕು ದಿನಗಳ ಹಿಂದೆ ರೈತ ಸಂಘದ ಕರೆ ಮೇರೆಗೆ ಮಂಡ್ಯ ನಗರ ಬಂದ್ ಕೂಡ ಯಶಸ್ವಿಯಾಗಿದೆ. ಇಷ್ಟಾಗಿಯೂ ಸರ್ಕಾರಗಳು ರೈತರ ಮನವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಹೋರಾಟದ ರೂಪ ಬದಲಿಸಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಬೆಳಗಾವಿಯಲ್ಲಿ ನಡೆುಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ರೈತರ ಸಮಸ್ಯೆ ಮತ್ತು ಕಬ್ಬಿನ ದರ ನಿಗದಿ ವಿಚಾರವಾಗಿ ಮಾತನಾಡದಿರುವುದು ಖಂಡನೀಯ. ರೈತರ ಹೋರಾಟದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಜಾ.ದಳ, ಕಾಂಗ್ರೆಸ್ ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಹೋಗಿ ಮಾತನಾಡುವುದನ್ನು ಬಿಟ್ಟು, ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಭತ್ತದ ಬೆಳೆಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಕಾನೂನು ಬದ್ಧಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮಂಡ್ಯ ಬಂದ್‌ಗೆ ಸಹಕರಿಸಿದ ವಿದ್ಯಾರ್ಥಿಗಳು, ವರ್ತಕರು, ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ವಾಲೀಕರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಎಲ್ಲರಿಗೂ ರೈತಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.

ರೈತಸಂಘದ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಚಿದಾನಂದ, ದಯಾನಂದ, ಚಂದ್ರು, ವೆಂಕಟೇಶ್, ಎಂ.ವಿ.ಜಗದೀಶ್, ವಿಜಯಕುಮಾರ್, ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಆಂದೋಲನ ಹಾಡುಪಾಡು | ಸ್ಟೀಲು ಪ್ಲೇಟುಗಳ ಸಾಲ ಕೊಡುವ ಬ್ಯಾಂಕು

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…

13 mins ago

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

2 hours ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

2 hours ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

2 hours ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

3 hours ago