ದೀಪಾವಳಿ ಮುನ್ನ ದಿನ ೪೦ ರೂ. ದಾಟಿದ ಸೇವಂತಿಗೆ; ಕನಕಾಂಬರ, ಮಲ್ಲಿಗೆ ಹೂ ಬೆಲೆಯಲ್ಲಿ ಏರಿಕೆ
ಮೈಸೂರು: ಸೋಮವಾರ ನರಕ ಚತುದರ್ಶಿ ಹಾಗೂ ಬುಧವಾರ ದೀಪಾವಳಿ ಹಬ್ಬವಿರುವ ಕಾರಣ ನಗರಕ್ಕೆ ರಾಶಿ, ರಾಶಿ ಸೇವಂತಿಗೆ ಹೂಗಳನ್ನು ತರುತ್ತಿರುವ ರೈತರು ಸೂಕ್ತ ಬೆಲೆ ಸಿಗದೆ ನಿರಾಶರಾಗಿದ್ದಾರೆ. ಉಳಿದಂತೆ ಮಲ್ಲಿಗೆ, ಕನಕಾಂಬರ ಹೂವಿನ ಬೆಲೆಯಲ್ಲಿ ಹೆಚ್ಚಳವಾಗಿದೆ.
ಹಬ್ಬದ ಆಚರಣೆ ಎಂದರೆ ಹೂವು ಹಾಗೂ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಕಂಡುಬರುತ್ತದೆ. ಹಬ್ಬಕ್ಕೆ ಒಂದು ವಾರವಿರುವಂತೆೆಯೇ ಹೂವಿನ ಬೆಲೆ ಗಗನಕ್ಕೇರುತ್ತದೆ. ಆದರೆ, ದೀಪಾವಳಿ ಹಬ್ಬದ ಮುನ್ನಾ ದಿನವಾದ ಭಾನುವಾರ ಹೂವಿನ ಬೆಲೆಯಲ್ಲಿ ಹೆಚ್ಚಳವಾಗಿಲ್ಲ.
ಎಚ್.ಡಿ.ಕೋಟೆ, ಹುಣಸೂರು ತಾಲ್ಲೂಕುಗಳು ಹಾಗೂ ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಕೆ.ಆರ್.ಪೇಟೆಯ ಭಾಗದ ರೈತರು ಹೆಚ್ಚಾಗಿ ಸೇವಂತಿಗೆ ಹೂಗಳನ್ನು ಬೆಳೆಯುತ್ತಾರೆ. ಸತತ ಮಳೆಯ ಕಾರಣ ಹೂವಿನ ಇಳುವರಿ ಹೆಚ್ಚಾಗಿದೆ. ಹೀಗಾಗಿ ಸಾವಿರಾರು ಮಂದಿ ರೈತರು ಮಾರಾಟಕ್ಕಾಗಿ ಹೂವನ್ನು ನಗರಕ್ಕೆ ತರುತ್ತಿದ್ದು, ಭಾನುವಾರ ಮುಂಜಾನೆಯಿಂದಲೇ ಹೂವಿನ ವ್ಯಾಪಾರ ಜೋರಾಗಿ ನಡೆಯಿತು. ನಗರದ ದೇವರಾಜ ಮಾರುಕಟ್ಟೆ, ದನ್ವಂತ್ರಿ ರಸ್ತೆ ಹಾಗೂ ಎಂ.ಜಿ.ರಸ್ತೆಯ ಮಾರುಕಟ್ಟೆಯಲ್ಲಿ ಸೇವಂತಿಗೆ ಹೂ ಬಿಕರಿಯಾಗುತ್ತಿದ್ದುದು ಕಂಡುಬಂತು.
ಆಯುಧ ಪೂಜೆಯ ಮುನ್ನ ದಿನ ಒಂದು ಮಾರು ಸೇವಂತಿಗೆ ಹೂವು ೨೦೦ ರೂ.ಗೆ ಮಾರಾಟವಾಗುವ ಮೂಲಕ ದಾಖಲೆ ನಿರ್ಮಿಸಿತ್ತು. ಆದರೆ, ದೀಪಾವಳಿಯ ಮುನ್ನ ದಿನ ಒಂದು ಮಾರು ಸೇವಂತಿಗೆ ಹೂವಿನ ದರ ೪೦ ರೂ. ದಾಟಲಿಲ್ಲ. ಉಳಿದಂತೆ ಮಲ್ಲಿಗೆ, ಕನಕಾಂಬರ, ಕಾಕಡ ಹೂವುಗಳ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳ ಹಿಂದೆ ೬೦೦ ರೂ.ಗೆ ಮಾರಾಟವಾಗುತ್ತಿದ್ದ ಮಲ್ಲಿಗೆ ಭಾನುವಾರ ೧,೨೦೦ ರೂ.ಗೆ ಹೆಚ್ಚಳವಾಗಿದೆ. ಕಳೆದ ವಾರ ೮೦೦ ರೂ. ಇದ್ದ ಕನಕಾಂಬರ ೧,೬೦೦ ರೂ.ಗೆ ಮಾರಾಟವಾಗಿದೆ.
ಕಳೆದ ವಾರ ೫೦೦ ರೂ. ಇದ್ದ ಮರ್ಲೆ ಭಾನುವಾರ ೧,೨೦೦ ಹಾಗೂ ಕಾಕಡ ೧,೨೦೦ ರೂ.ಗೆ ಮಾರಾಟವಾಗಿದ್ದು ಕಂಡುಬಂತು. ಉಳಿದಂತೆ ಊಟಿ ಮಲ್ಲಿಗೆ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗದೆ ಕೆಜಿಗೆ ೨೦೦ ರೂ.ಗೆ ಮಾರಾಟವಾಯಿತು. ಕಳೆದ ವಾರ ೧೨೦ ರೂ.ಗೆ ಮಾರಾಟವಾಗುತ್ತಿದ್ದ ಗುಲಾಬಿ ಹೂ ಹಬ್ಬದ ದಿನ ೧೦ ರೂ.ಗೆ ಮಾರಾಟವಾಯಿತು.
ದಸರಾ ವೇಳೆ ಹೂವಿನ ಬೆಲೆ ಸಾಕಷ್ಟು ಹೆಚ್ಚಳವಾಗಿತ್ತು. ನಮಗೆ ಸಾಕಷ್ಟು ಲಾಭ ಕೂಡ ತಂದುಕೊಟ್ಟಿತ್ತು. ಆದರೆ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಲಾಭ ದೊರಕಿಲ್ಲ. ಸೋಮವಾರದ ನಂತರ ಬೆಲೆ ಹೆಚ್ಚಳವಾಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೇವೆ.
–ಮಹೇಶ್, ಕೆ.ಆರ್.ಪೇಟೆ.
ಹಬ್ಬದ ವೇಳೆ ಹೂವಿನ ಬೆಲೆ ಹೆಚ್ಚಳವಾಗುವುದು ಸಾಮಾನ್ಯ. ಅದರಂತೆ ಸೇವಂತಿಗೆ, ಊಟಿ ಮಲ್ಲಿಗೆ ಹೊರತುಪಡಿಸಿ ಉಳಿದ ಹೂಗಳ ಬೆಲೆ ಹೆಚ್ಚಳವಾಗಿದೆ. ಈ ಭಾಗದಲ್ಲಿ ದೀಪಾವಳಿ ಬುಧವಾರ ಆಚರಿಸುವುದರಿಂದ ಸೋಮವಾರ ಹೂವುಗಳ ಬೆಲೆ ಹೆಚ್ಚಳವಾಗಬಹುದು.
–ಶ್ರೀನಿವಾಸ್, ಹೂ ವ್ಯಾಪಾರಗಾರರು, ದೇವರಾಜ ಮಾರುಕಟ್ಟೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…