ಜಿಲ್ಲೆಗಳು

ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹೆಚ್ಚಾಗದ ಹೂ ಬೆಲೆ

ದೀಪಾವಳಿ ಮುನ್ನ ದಿನ ೪೦ ರೂ. ದಾಟಿದ ಸೇವಂತಿಗೆ; ಕನಕಾಂಬರ, ಮಲ್ಲಿಗೆ ಹೂ ಬೆಲೆಯಲ್ಲಿ ಏರಿಕೆ

ಮೈಸೂರು: ಸೋಮವಾರ ನರಕ ಚತುದರ್ಶಿ ಹಾಗೂ ಬುಧವಾರ ದೀಪಾವಳಿ ಹಬ್ಬವಿರುವ ಕಾರಣ ನಗರಕ್ಕೆ ರಾಶಿ, ರಾಶಿ ಸೇವಂತಿಗೆ ಹೂಗಳನ್ನು ತರುತ್ತಿರುವ ರೈತರು ಸೂಕ್ತ ಬೆಲೆ ಸಿಗದೆ ನಿರಾಶರಾಗಿದ್ದಾರೆ. ಉಳಿದಂತೆ ಮಲ್ಲಿಗೆ, ಕನಕಾಂಬರ ಹೂವಿನ ಬೆಲೆಯಲ್ಲಿ ಹೆಚ್ಚಳವಾಗಿದೆ.
ಹಬ್ಬದ ಆಚರಣೆ ಎಂದರೆ ಹೂವು ಹಾಗೂ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಕಂಡುಬರುತ್ತದೆ. ಹಬ್ಬಕ್ಕೆ ಒಂದು ವಾರವಿರುವಂತೆೆಯೇ ಹೂವಿನ ಬೆಲೆ ಗಗನಕ್ಕೇರುತ್ತದೆ. ಆದರೆ, ದೀಪಾವಳಿ ಹಬ್ಬದ ಮುನ್ನಾ ದಿನವಾದ ಭಾನುವಾರ ಹೂವಿನ ಬೆಲೆಯಲ್ಲಿ ಹೆಚ್ಚಳವಾಗಿಲ್ಲ.
ಎಚ್.ಡಿ.ಕೋಟೆ, ಹುಣಸೂರು ತಾಲ್ಲೂಕುಗಳು ಹಾಗೂ ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಕೆ.ಆರ್.ಪೇಟೆಯ ಭಾಗದ ರೈತರು ಹೆಚ್ಚಾಗಿ ಸೇವಂತಿಗೆ ಹೂಗಳನ್ನು ಬೆಳೆಯುತ್ತಾರೆ. ಸತತ ಮಳೆಯ ಕಾರಣ ಹೂವಿನ ಇಳುವರಿ ಹೆಚ್ಚಾಗಿದೆ. ಹೀಗಾಗಿ ಸಾವಿರಾರು ಮಂದಿ ರೈತರು ಮಾರಾಟಕ್ಕಾಗಿ ಹೂವನ್ನು ನಗರಕ್ಕೆ ತರುತ್ತಿದ್ದು, ಭಾನುವಾರ ಮುಂಜಾನೆಯಿಂದಲೇ ಹೂವಿನ ವ್ಯಾಪಾರ ಜೋರಾಗಿ ನಡೆಯಿತು. ನಗರದ ದೇವರಾಜ ಮಾರುಕಟ್ಟೆ, ದನ್ವಂತ್ರಿ ರಸ್ತೆ ಹಾಗೂ ಎಂ.ಜಿ.ರಸ್ತೆಯ ಮಾರುಕಟ್ಟೆಯಲ್ಲಿ ಸೇವಂತಿಗೆ ಹೂ ಬಿಕರಿಯಾಗುತ್ತಿದ್ದುದು ಕಂಡುಬಂತು.
ಆಯುಧ ಪೂಜೆಯ ಮುನ್ನ ದಿನ ಒಂದು ಮಾರು ಸೇವಂತಿಗೆ ಹೂವು ೨೦೦ ರೂ.ಗೆ ಮಾರಾಟವಾಗುವ ಮೂಲಕ ದಾಖಲೆ ನಿರ್ಮಿಸಿತ್ತು. ಆದರೆ, ದೀಪಾವಳಿಯ ಮುನ್ನ ದಿನ ಒಂದು ಮಾರು ಸೇವಂತಿಗೆ ಹೂವಿನ ದರ ೪೦ ರೂ. ದಾಟಲಿಲ್ಲ. ಉಳಿದಂತೆ ಮಲ್ಲಿಗೆ, ಕನಕಾಂಬರ, ಕಾಕಡ ಹೂವುಗಳ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳ ಹಿಂದೆ ೬೦೦ ರೂ.ಗೆ ಮಾರಾಟವಾಗುತ್ತಿದ್ದ ಮಲ್ಲಿಗೆ ಭಾನುವಾರ ೧,೨೦೦ ರೂ.ಗೆ ಹೆಚ್ಚಳವಾಗಿದೆ. ಕಳೆದ ವಾರ ೮೦೦ ರೂ. ಇದ್ದ ಕನಕಾಂಬರ ೧,೬೦೦ ರೂ.ಗೆ ಮಾರಾಟವಾಗಿದೆ.
ಕಳೆದ ವಾರ ೫೦೦ ರೂ. ಇದ್ದ ಮರ್ಲೆ ಭಾನುವಾರ ೧,೨೦೦ ಹಾಗೂ ಕಾಕಡ ೧,೨೦೦ ರೂ.ಗೆ ಮಾರಾಟವಾಗಿದ್ದು ಕಂಡುಬಂತು. ಉಳಿದಂತೆ ಊಟಿ ಮಲ್ಲಿಗೆ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗದೆ ಕೆಜಿಗೆ ೨೦೦ ರೂ.ಗೆ ಮಾರಾಟವಾಯಿತು. ಕಳೆದ ವಾರ ೧೨೦ ರೂ.ಗೆ ಮಾರಾಟವಾಗುತ್ತಿದ್ದ ಗುಲಾಬಿ ಹೂ ಹಬ್ಬದ ದಿನ ೧೦ ರೂ.ಗೆ ಮಾರಾಟವಾಯಿತು.


ದಸರಾ ವೇಳೆ ಹೂವಿನ ಬೆಲೆ ಸಾಕಷ್ಟು ಹೆಚ್ಚಳವಾಗಿತ್ತು. ನಮಗೆ ಸಾಕಷ್ಟು ಲಾಭ ಕೂಡ ತಂದುಕೊಟ್ಟಿತ್ತು. ಆದರೆ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಲಾಭ ದೊರಕಿಲ್ಲ. ಸೋಮವಾರದ ನಂತರ ಬೆಲೆ ಹೆಚ್ಚಳವಾಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೇವೆ.
ಮಹೇಶ್, ಕೆ.ಆರ್.ಪೇಟೆ.


ಹಬ್ಬದ ವೇಳೆ ಹೂವಿನ ಬೆಲೆ ಹೆಚ್ಚಳವಾಗುವುದು ಸಾಮಾನ್ಯ. ಅದರಂತೆ ಸೇವಂತಿಗೆ, ಊಟಿ ಮಲ್ಲಿಗೆ ಹೊರತುಪಡಿಸಿ ಉಳಿದ ಹೂಗಳ ಬೆಲೆ ಹೆಚ್ಚಳವಾಗಿದೆ. ಈ ಭಾಗದಲ್ಲಿ ದೀಪಾವಳಿ ಬುಧವಾರ ಆಚರಿಸುವುದರಿಂದ ಸೋಮವಾರ ಹೂವುಗಳ ಬೆಲೆ ಹೆಚ್ಚಳವಾಗಬಹುದು.
ಶ್ರೀನಿವಾಸ್, ಹೂ ವ್ಯಾಪಾರಗಾರರು, ದೇವರಾಜ ಮಾರುಕಟ್ಟೆ.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

39 mins ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

2 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

8 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

8 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

8 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

8 hours ago