ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು.
ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲು ಹಳ್ಳದಿಂದ 101 ಕುಂಭಗಳ ಹಾಲರವಿ ಉತ್ಸವವನ್ನು ನೆರವೇರಿಸಲಾಯಿತು.
ಮಲೆ ಮಾದಪ್ಪನಿಗೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಎಣ್ಣೆ ಮಜ್ಜನೆ ಸೇವೆ, ಧಾರ್ಮಿಕ ಉತ್ಸವಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ಣವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು.
ಚಾ.ನಗರ ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಮಾತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡಿನಿಂದಲೂ ಭಕ್ತರ ದಂಡು ನೆರೆದಿತ್ತು. ಹಲವು ಭಕ್ತರು ತಂಡೋಪತಂಡವಾಗಿ ಕಾಲ್ನಡಿಗೆ ಮೂಲಕವೂ ಬಂದು ಮ.ಬೆಟ್ಟದಲ್ಲಿಯೇ ಬೀಡು ಬಿಟ್ಟಿದ್ದರು.
ಹರಕೆ ಹೊತ್ತ ಭಕ್ತರು ಮುಡಿಸೇವೆ, ಪೆಂಜಿನಸೇವೆ, ಉರುಳು ಸೇವೆ, ಚಿನ್ನದ ತೇರು ಸೇವೆ, ಹುಲಿವಾಹನ ಸೇವೆ, ರುದ್ರಾಕ್ಷಿವಾಹನ ಸೇವೆ ಹಾಗೂ ಬಸವ ವಾಹನ ಸೇವೆಗಳನ್ನೂ ಮಾಡುವ ಜೊತೆಗೆ ಕೆಲವರು ಪರ(ಪರ್ವ)ಸೇವೆಯನ್ನು ನೆರವೇರಿಸಿ ಅನ್ನ ಸಂತರ್ಪಣೆ ಮಾಡಿ ಮಾದಪ್ಪನ ಕೃಪೆಗೆ ಪಾತ್ರರಾದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…