ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು.
ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲು ಹಳ್ಳದಿಂದ 101 ಕುಂಭಗಳ ಹಾಲರವಿ ಉತ್ಸವವನ್ನು ನೆರವೇರಿಸಲಾಯಿತು.
ಮಲೆ ಮಾದಪ್ಪನಿಗೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಎಣ್ಣೆ ಮಜ್ಜನೆ ಸೇವೆ, ಧಾರ್ಮಿಕ ಉತ್ಸವಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ಣವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು.
ಚಾ.ನಗರ ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಮಾತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡಿನಿಂದಲೂ ಭಕ್ತರ ದಂಡು ನೆರೆದಿತ್ತು. ಹಲವು ಭಕ್ತರು ತಂಡೋಪತಂಡವಾಗಿ ಕಾಲ್ನಡಿಗೆ ಮೂಲಕವೂ ಬಂದು ಮ.ಬೆಟ್ಟದಲ್ಲಿಯೇ ಬೀಡು ಬಿಟ್ಟಿದ್ದರು.
ಹರಕೆ ಹೊತ್ತ ಭಕ್ತರು ಮುಡಿಸೇವೆ, ಪೆಂಜಿನಸೇವೆ, ಉರುಳು ಸೇವೆ, ಚಿನ್ನದ ತೇರು ಸೇವೆ, ಹುಲಿವಾಹನ ಸೇವೆ, ರುದ್ರಾಕ್ಷಿವಾಹನ ಸೇವೆ ಹಾಗೂ ಬಸವ ವಾಹನ ಸೇವೆಗಳನ್ನೂ ಮಾಡುವ ಜೊತೆಗೆ ಕೆಲವರು ಪರ(ಪರ್ವ)ಸೇವೆಯನ್ನು ನೆರವೇರಿಸಿ ಅನ್ನ ಸಂತರ್ಪಣೆ ಮಾಡಿ ಮಾದಪ್ಪನ ಕೃಪೆಗೆ ಪಾತ್ರರಾದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…