ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು.
ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲು ಹಳ್ಳದಿಂದ 101 ಕುಂಭಗಳ ಹಾಲರವಿ ಉತ್ಸವವನ್ನು ನೆರವೇರಿಸಲಾಯಿತು.
ಮಲೆ ಮಾದಪ್ಪನಿಗೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಎಣ್ಣೆ ಮಜ್ಜನೆ ಸೇವೆ, ಧಾರ್ಮಿಕ ಉತ್ಸವಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ಣವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು.
ಚಾ.ನಗರ ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಮಾತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡಿನಿಂದಲೂ ಭಕ್ತರ ದಂಡು ನೆರೆದಿತ್ತು. ಹಲವು ಭಕ್ತರು ತಂಡೋಪತಂಡವಾಗಿ ಕಾಲ್ನಡಿಗೆ ಮೂಲಕವೂ ಬಂದು ಮ.ಬೆಟ್ಟದಲ್ಲಿಯೇ ಬೀಡು ಬಿಟ್ಟಿದ್ದರು.
ಹರಕೆ ಹೊತ್ತ ಭಕ್ತರು ಮುಡಿಸೇವೆ, ಪೆಂಜಿನಸೇವೆ, ಉರುಳು ಸೇವೆ, ಚಿನ್ನದ ತೇರು ಸೇವೆ, ಹುಲಿವಾಹನ ಸೇವೆ, ರುದ್ರಾಕ್ಷಿವಾಹನ ಸೇವೆ ಹಾಗೂ ಬಸವ ವಾಹನ ಸೇವೆಗಳನ್ನೂ ಮಾಡುವ ಜೊತೆಗೆ ಕೆಲವರು ಪರ(ಪರ್ವ)ಸೇವೆಯನ್ನು ನೆರವೇರಿಸಿ ಅನ್ನ ಸಂತರ್ಪಣೆ ಮಾಡಿ ಮಾದಪ್ಪನ ಕೃಪೆಗೆ ಪಾತ್ರರಾದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…