ಜಿಲ್ಲೆಗಳು

ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಲರವಿ ಸೇವೆ

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು.

ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲು ಹಳ್ಳದಿಂದ 101 ಕುಂಭಗಳ ಹಾಲರವಿ ಉತ್ಸವವನ್ನು ನೆರವೇರಿಸಲಾಯಿತು.

ಮಲೆ ಮಾದಪ್ಪನಿಗೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಎಣ್ಣೆ ಮಜ್ಜನೆ ಸೇವೆ, ಧಾರ್ಮಿಕ ಉತ್ಸವಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ಣವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.

ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು.

ಚಾ.ನಗರ ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಮಾತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡಿನಿಂದಲೂ ಭಕ್ತರ ದಂಡು ನೆರೆದಿತ್ತು. ಹಲವು ಭಕ್ತರು ತಂಡೋಪತಂಡವಾಗಿ ಕಾಲ್ನಡಿಗೆ ಮೂಲಕವೂ ಬಂದು ಮ.ಬೆಟ್ಟದಲ್ಲಿಯೇ ಬೀಡು ಬಿಟ್ಟಿದ್ದರು.

ಹರಕೆ ಹೊತ್ತ ಭಕ್ತರು ಮುಡಿಸೇವೆ, ಪೆಂಜಿನಸೇವೆ, ಉರುಳು ಸೇವೆ, ಚಿನ್ನದ ತೇರು ಸೇವೆ, ಹುಲಿವಾಹನ ಸೇವೆ, ರುದ್ರಾಕ್ಷಿವಾಹನ ಸೇವೆ ಹಾಗೂ ಬಸವ ವಾಹನ ಸೇವೆಗಳನ್ನೂ ಮಾಡುವ ಜೊತೆಗೆ ಕೆಲವರು ಪರ(ಪರ್ವ)ಸೇವೆಯನ್ನು ನೆರವೇರಿಸಿ ಅನ್ನ ಸಂತರ್ಪಣೆ ಮಾಡಿ ಮಾದಪ್ಪನ ಕೃಪೆಗೆ ಪಾತ್ರರಾದರು.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

5 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

5 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

5 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

5 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

5 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

5 hours ago