ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್ಟೇಬಲ್ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಪತ್ನಿ ಹತ್ಯೆ ಮಾಡಿದ್ದ ಪತಿಗೆ ಜೈಲು ಶಿಕ್ಷೆ