ಜಿಲ್ಲೆಗಳು

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

5 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

5 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

6 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

6 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

7 hours ago