ಜಿಲ್ಲೆಗಳು

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago