ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್ಟೇಬಲ್ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…