ಜಿಲ್ಲೆಗಳು

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಾಮರಾಜನಗರ: ನಿಯಮಬಾಹಿರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ೪೩೦ ಸರ್ಕಾರಿ ಪದವಿ ಕಾಲೇಜುಗಳಿದ್ದು ೩ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯನ್ನು ಕಳೆದ ಎರಡು ದಶಕಗಳಿಂದ ಶೇ.೮೦ ರಷ್ಟು ಅತಿಥಿ ಉಪನ್ಯಾಸಕರು ನೀಡಿದ್ದಾರೆ. ಇವರ ಸೇವೆಯನ್ನು ಕಾಲೇಜು ಶಿಕ್ಷಣ ಬಳಸಿಕೊಂಡಿದೆ ಎಂದರು.
ಕರ್ನಾಟಕ ನಾಗರಿಕ ಸೇವಾ ನೇಮಕಾತಿ ೧೯೭೭ ನಿಯಮ ೧೪ರ ಅಡಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಲು ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಿ ತೀರ್ಮಾನ ಕೈಗೊಳ್ಳಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ತರಗತಿಯನ್ನು ೪೦ಃ೬೦ರ ಪ್ರಕಾರ ತರಗತಿ ವಿಭಜಿಸಿ ಕಾರ್ಯಭಾರ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಎಡಿಸಿ ಕಾತ್ಯಾಯಿನಿದೇವಿ ಅವರು ಅಹವಾಲು ಸ್ವೀಕರಿಸಿದರು. ಬಳಿಕ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಕೈಬಿಡಲಾಯಿತು. ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago