ಇಂಡಿಯಾ ಗೇಟ್ ನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಗ್ರಾನೈಟ್ ಪ್ರತಿಮೆಯನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರ ತಂಡ. ಈ ಮೂರ್ತಿ ಕೆತ್ತನೆಗೆ ಶಿಲ್ಪಿಗಳ ತಂಡ ಬರೋಬ್ಬರಿ 26 ಸಾವಿರ ಮಾನವ ದಿನಗಳನ್ನು ವ್ಯಯ ಮಾಡಿದೆ.
ಮೈಸೂರು: ಸಾಂಸ್ಕೃತಿಕ ನಗರದ ಶಿಲ್ಪಿ ಅರುಣ್ ಯೋಗಿ ರಾಜ್ ಮತ್ತವರ ತಂಡ ಮತ್ತೆ ಸುದ್ದಿಯಲ್ಲಿದೆ. ಹೊಸದಿಲ್ಲಿಯ ಇಂಡಿಯಾ ಗೇಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಗ್ರಾನೈಟ್ ಪ್ರತಿಮೆಯನ್ನು ಕೆತ್ತನೆ ಮಾಡಿದ್ದು ನಮ್ಮೂರ ಶಿಲ್ಪಿ ಅರುಣ್ ಯೋಗಿರಾಜ್ ಮತ್ತವರ ತಂಡ. ಈ ಮೂರ್ತಿ ಕೆತ್ತನೆಗೆ ಶಿಲ್ಪಿಗಳ ತಂಡ ಬರೋಬ್ಬರಿ 26 ಸಾವಿರ ಮಾನವ ದಿನಗಳನ್ನು ವ್ಯಯ ಮಾಡಿದೆ.
ಸುಮಾರು 280 ಟನ್ ತೂಕವಿರುವ ಗ್ರಾನೈಟ್ನಿಂದ ಈ ಮೂರ್ತಿಯನ್ನು ತೆಲಂಗಾಣದ (Telangana) ಖಮ್ಮಮ್ನಲ್ಲಿ (Khammam) ಕೆತ್ತನೆ ಮಾಡಲಾಯಿತು. ಇದನ್ನು ದೆಹಲಿಗೆ ಸಾಗಿಸುವುದಕ್ಕಾಗಿ 100 ಅಡಿ ಉದ್ದದ 140 ಚಕ್ರ ಹಾಗೂ 14 ಆ್ಯಕ್ಸೆಲ್ಗಳುಳ್ಳ ವಿಶೇಷ ಲಾರಿಯನ್ನು ವಿನ್ಯಾಸ ಮಾಡಲಾಗಿತ್ತು. ಅಲ್ಲದೇ ಇದನ್ನು ಹೆದ್ದಾರಿಯವರೆಗೆ ಸಾಗಿಸಲು ವಿಶೇಷವಾದ ರಸ್ತೆಯನ್ನೂ ನಿರ್ಮಾಣ ಮಾಡಲಾಗಿತ್ತು. ಸುಮಾರು 1,665 ಕಿ.ಮೀ. ದೂರ ಸಾಗಿದ ಈ ಲಾರಿ ಸುರಕ್ಷಿತವಾಗಿ ಮೂರ್ತಿಯನ್ನು ದೆಹಲಿಗೆ ಸ್ಥಳಾಂತರಿಸಿತ್ತು.
ಮೂರ್ತಿಯ ವಿಶೇಷತೆ:
ಈ ಮೂರ್ತಿಯನ್ನು ಸಾಂಪ್ರದಾಯಿಕ ಕೌಶಲ್ಯ ಬಳಸಿ ಕೆತ್ತನೆ ಮಾಡಲಾಗಿದೆ. ಇದೊಂದು ಏಕಾಶಿಲಾ ವಿಗ್ರಹವಾಗಿದ್ದು, ಕಪ್ಪು ಶಿಲೆಯಲ್ಲಿ ಕೆತ್ತಲಾಗಿದೆ. ಈ ಪ್ರತಿಮೆ 28 ಅಡಿ ಎತ್ತರವಾಗಿದ್ದು, ಒಟ್ಟು 65 ಟನ್ ತೂಕವಿದೆ. ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ವೇಳೆ ಇಂಡಿಯಾ ಗೇಟ್ನಲ್ಲಿ ಅವರ ಮೂರ್ತಿ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದರು.
ಬಳಿಕ ಕಲಾವಿದರ ಆಯ್ಕೆಗೆ ಜನವರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿತ್ತು. ಆರು ಕಲಾವಿದರ ಕಲಾ ಕೌಶಲ್ಯ, ಹಿಂದಿನ ಕೆಲಸ ಹಾಗೂ ಸಾಧನೆಯನ್ನು ಚರ್ಚೆ ಮಾಡಲಾಗಿತ್ತು. ಅಂತಿಮವಾಗಿ 6 ತಲೆಮಾರಿನಿಂದ ಶಿಲ್ಪ ಕಲಾಕೃತಿ ಮಾಡಿಕೊಂಡು ಬಂದಿರುವ ಯೋಗಿರಾಜ್ ಕುಟುಂಬಕ್ಕೆ ಈ ಅವಕಾಶ ದೊರೆತಿತ್ತು ಇದೇ ಸಂದರ್ಭದಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿದ್ದ ಅರುಣ್ ಅವರಿಗೆ 2 ಅಡಿ ಎತ್ತರದ ನೇತಾಜಿ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ದರು.
ಗಣರಾಜ್ಯ ಕಾರ್ಯಕ್ರಮಕ್ಕೆ ಆಹ್ವಾನ
ನೇತಾಜಿ ಪ್ರತಿಮೆ ಅನಾವರಣ ಬಳಿಕ, ಕರ್ತವ್ಯಪಥ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂಬರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಶಿಲ್ಪಿ ಅರುಣ್ ಯೋಗಿ ಮತ್ತವರ ತಂಡ ಮುಂಬರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಕರ್ತವ್ಯಪಥವಾಯಿತು ರಾಜಪಥ
ಇತ್ತ ನವೀಕೃತ ಕರ್ತವ್ಯಪಥ ಮತ್ತು ಶಿಲ್ಪಿ ಅರುಣ್ ನಿರ್ಮಿಸಿರುವ 28 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಈ ಹಿಂದೆ ರಾಜಪಥವೆಂದು ಕರೆಯಲಾಗುತ್ತಿದ್ದ ರಾಷ್ಟ್ರಪತಿ ಭವನ ಮತ್ತು ಇಂಡಿಯಾ ಗೇಟ್ ನಡುವಿನ ಸ್ಥಳದ ಹೆಸರನ್ನು ಕರ್ತವ್ಯಪಥ ಎಂದು ಬದಲಾಯಿಸಿದ್ದು, ದೇಶಕ್ಕೆ ಹೊಸ ಶಕ್ತಿ ಮತ್ತು ಸ್ಫೂರ್ತಿಯನ್ನು ನೀಡಿದೆ. ಗುಲಾಮತನದ ಸಂಕೇತವಾಗಿದ್ದ ಕಿಂಗ್ವೇ ಅಥವಾ ರಾಜಪಥವನ್ನು ಇದೀಗ ಇತಿಹಾಸದ ಪುಟಗಳಿಗೆ ಸೇರಿಸಲಾಗಿದ್ದು, ಈ ಮೂಲಕ ಅದನ್ನು ಶಾಶ್ವತವಾಗಿ ಅಳಿಸಿಹಾಕಲಾಗಿದೆ ಎಂದರು.
‘ಇಂದು ನಾವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಬೃಹತ್ ಪುತ್ಥಳಿಯನ್ನು ಇಂಡಿಯಾ ಗೇಟ್ ಬಳಿ ಅಳವಡಿಸಿದ್ದೇವೆ. ಈ ಹಿಂದೆ ಬ್ರಿಟಿಷರ ಪ್ರತಿನಿಧಿಯೊಬ್ಬರ ಪ್ರತಿಮೆ ಇಲ್ಲಿ ಸ್ಥಾಪನೆಯಾಗಿತ್ತು. ಇದೀಗ ನೇತಾಜಿ ಪುತ್ಥಳಿ ಸ್ಥಾಪನೆಯೊಂದಿಗೆ ನಾವು ಸಬಲೀಕರಣಗೊಂಡ ಭಾರತದ ಹೊಸ ಪಥವನ್ನು ಸ್ಥಾಪಿಸಿದ್ದೇವೆ ಎಂದು ಮೋದಿ ಹೇಳಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…