ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ. ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಾದಾರರು ಮತ್ತು ಅವರ ಕುಟುಂಬದವರಿಗೆ ಉನ್ನತ ವೈದ್ಯಕೀಯ ಸೌಲಭ್ಯ ದೊರೆಯುವುದಿಲ್ಲ. ಜೊತೆಗೆ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದ ಹಿತದೃಷ್ಟಿಯಿಂದ ಕೈಗೊಂಡಿರುವ ತೀರ್ಮಾನ ಸರಿಯಲ್ಲ. ಕಾರ್ಮಿಕರಿಂದ ವಾರ್ಷಿಕ 2,100 ಕೋಟಿ ರೂ., ಸಂಗ್ರಹಿಸಿ ಕಾರ್ಮಿಕರ ಮಾಸಿಕ ವಂತಿಕೆಯಿಂದ ನಡೆಯುವ ಇಲಾಖೆಯನ್ನು ಸೊಸೈಟಿಯನ್ನಾಗಿ ಮಾಡಿದಲ್ಲಿ ಪ್ರಮುಖ ಇಲಾಖೆಯೊಂದು ರಾಜ್ಯ ಸರ್ಕಾರದ ಕೈತಪ್ಪಿದಂತಾಗುತ್ತದೆ ಎಂದು ಬೇಸರಿಸಿದರು.
ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸೊಸೈಟಿ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಿವೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೈ ಬಿಟ್ಟು ರಾಜ್ಯಸರ್ಕಾರದಡಿಯಲ್ಲಿಯೇ ಮುಂದುವರಿಸಬೇಕೆಂದು ಆಗ್ರಹಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…