ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗಿದೆ. ಅದೇ ರೀತಿ ಸರಕು ಸಾಗಣೆ ವಾಹನಗಳಲ್ಲಿ ಯಥೇಚ್ಛವಾಗಿ ಭಕ್ತರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಚಾಲಕನಿಗೆ ಮಾತ್ರ ವಿಮೆ ಇರುವುದರಿಂದ ಯಾವುದಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಇತರರಿಗೆ ಯಾವುದೇ ವಿಮೆ ಇರುವುದಿಲ್ಲ, ಆದ್ದರಿಂದ ಜಿಲ್ಲಾಡಳಿತ ಭಕ್ತರ ಹಿತದೃಷ್ಟಿಯಿಂದ ಸರಕು ಸಾಗಣೆ ವಾಹನಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಮೂರು ಚಕ್ರದ ಆಟೋಗಳಲ್ಲಿ ಹೆಚ್ಚಿನ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಜಾತ್ರಾ ಸಂದರ್ಭಗಳಲ್ಲಿ ಆಟೋ ಪಲ್ಟಿ ಯಾಗಿ ಹಲವು ಸಾವು ನೋವು ಆಗಿರುವುದರಿಂದ ಜಿಲ್ಲಾಡಳಿತ ಸರಕು ಸಾಗಣೆ ವಾಹನಗಳನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರಾದ ಚೇತನ್ ಒತ್ತಾಯಿಸಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…