ಜಿಲ್ಲೆಗಳು

ಮಲೆ ಮಾದೇಶ್ವರ ಬೆಟ್ಟಕ್ಕೆ ಗೂಡ್ಸ್ ವಾಹನಗಳಲ್ಲಿ ಜನರ ಸಾಗಣೆ ನಿರ್ಬಂಧಕ್ಕೆ ಆಗ್ರಹ

ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗಿದೆ. ಅದೇ ರೀತಿ ಸರಕು ಸಾಗಣೆ ವಾಹನಗಳಲ್ಲಿ ಯಥೇಚ್ಛವಾಗಿ ಭಕ್ತರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಚಾಲಕನಿಗೆ ಮಾತ್ರ ವಿಮೆ ಇರುವುದರಿಂದ ಯಾವುದಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಇತರರಿಗೆ ಯಾವುದೇ ವಿಮೆ ಇರುವುದಿಲ್ಲ, ಆದ್ದರಿಂದ ಜಿಲ್ಲಾಡಳಿತ ಭಕ್ತರ ಹಿತದೃಷ್ಟಿಯಿಂದ ಸರಕು ಸಾಗಣೆ ವಾಹನಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಮೂರು ಚಕ್ರದ ಆಟೋಗಳಲ್ಲಿ ಹೆಚ್ಚಿನ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಜಾತ್ರಾ ಸಂದರ್ಭಗಳಲ್ಲಿ ಆಟೋ ಪಲ್ಟಿ ಯಾಗಿ ಹಲವು ಸಾವು ನೋವು ಆಗಿರುವುದರಿಂದ ಜಿಲ್ಲಾಡಳಿತ ಸರಕು ಸಾಗಣೆ ವಾಹನಗಳನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರಾದ ಚೇತನ್ ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago