ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ
ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಮೆರವಣಿಗೆ ಹೊರಟ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ತಲುಪಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಣ್ಣಾರಿ ಅಮ್ಮನ್ ಸಕ್ಕರೆ ಒಟ್ಟು ೫ ಘಟಕಗಳನ್ನು ಹೊಂದಿದ್ದು ೨ ನಮ್ಮ ರಾಜ್ಯದ ಅಳಗಂಚಿ ಮತ್ತು ಕುಂತೂರುಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿನ ಕಾರ್ಮಿಕರಿಗೆ ಕಳೆದ ೫ ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ವೇತನ ಪರಿಷ್ಕರಣೆಗೆ ಕಂಪನಿಯ ಆಡಳಿತ ವರ್ಗಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ತ್ರಿಪಕ್ಷೀಯ ಒಪ್ಪಂದದ ಪ್ರಕಾರ ವೇತನ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ನಂತರ ಈ ಸರ್ಕಾರದ ಆದೇಶದಂತೆ ನಾವು ವೇತನ ಪರಿಷ್ಕರಣೆ ಮಾಡುವುದಿಲ್ಲ. ಕಂಪನಿ ನಿಯಮಗಳ ಪ್ರಕಾರ ಮಾಡುವುದಾಗಿ ಹೇಳಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ತ್ರಿಪಕ್ಷೀಯ ಒಪ್ಪಂದವನ್ನು ತಿರಸ್ಕರಿಸಿ ಬಂದರೆ ವೇತನದ ಬಗ್ಗೆ ಮಾತನಾಡುವುದಾಗಿ ಕಂಪನಿ ಹೇಳುತ್ತಿದೆ. ಆದ್ದರಿಂದ ಒಪ್ಪಂದದ ಪ್ರಕಾರ ವೇತನ ನೀಡುವಂತೆ ಕಾರ್ಮಿಕ ಆಯುಕ್ತರ ಮೂಲಕ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಕಂಪನಿಯಲ್ಲಿ ೬ ವರ್ಷಕ್ಕೂ ಹೆಚ್ಚು ಅವಧಿಯ ತರಬೇತಿ ಪೂರೈಸಿ ಖಾಯಂಗೆ ೨೦ಕ್ಕೂ ಹೆಚ್ಚು ಕಾರ್ಮಿಕರು ಕಾಯುತ್ತಿದ್ದಾರೆ. ಹೊರಗುತ್ತಿಗೆ ಕಾರ್ಮಿಕರಿಗೆ ಯಾವುದೇ ಕನಿಷ್ಟ ಸೌಲಭ್ಯಗಳನ್ನು ನೀಡದೆ ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದರೂ ಕಂಪನಿ ಆಡಳಿತ ವರ್ಗವು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಕಂಪನಿಗಳ ಇತರೆ ಘಟಕಗಳಲ್ಲಿ ನೀಡಿರುವಂತೆ ಎಲ್ಲಾ ಕಾರ್ಮಿಕರಿಗೆ ವಸತಿ ಸೌಕರ್ಯ ನೀಡಬೇಕು, ಅಲ್ಲಿಯವರೆಗೂ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮನೆ ಬಾಡಿಗೆ ಭತ್ಯೆ ನೀಡಬೇಕು. ದೂರದಿಂದ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಕಂಪನಿಯಿಂದ
ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕಾರ್ಖಾನೆಯ ಮುಂದಿನ ಎಲ್ಲಾ ಹಂತದ ನೇಮಕಾತಿಗಳಲ್ಲಿ ಸ್ಥಳೀಯರನ್ನೆ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…