ಜಿಲ್ಲೆಗಳು

ಸರ್ಕಾರದ ಆದೇಶದಂತೆ ವೇತನ ಪರಿಷ್ಕರಣೆಗೆ ಆಗ್ರಹ

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಮೆರವಣಿಗೆ ಹೊರಟ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ತಲುಪಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಣ್ಣಾರಿ ಅಮ್ಮನ್ ಸಕ್ಕರೆ ಒಟ್ಟು ೫ ಘಟಕಗಳನ್ನು ಹೊಂದಿದ್ದು ೨ ನಮ್ಮ ರಾಜ್ಯದ ಅಳಗಂಚಿ ಮತ್ತು ಕುಂತೂರುಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿನ ಕಾರ್ಮಿಕರಿಗೆ ಕಳೆದ ೫ ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ವೇತನ ಪರಿಷ್ಕರಣೆಗೆ ಕಂಪನಿಯ ಆಡಳಿತ ವರ್ಗಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ತ್ರಿಪಕ್ಷೀಯ ಒಪ್ಪಂದದ ಪ್ರಕಾರ ವೇತನ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ನಂತರ ಈ ಸರ್ಕಾರದ ಆದೇಶದಂತೆ ನಾವು ವೇತನ ಪರಿಷ್ಕರಣೆ ಮಾಡುವುದಿಲ್ಲ. ಕಂಪನಿ ನಿಯಮಗಳ ಪ್ರಕಾರ ಮಾಡುವುದಾಗಿ ಹೇಳಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ತ್ರಿಪಕ್ಷೀಯ ಒಪ್ಪಂದವನ್ನು ತಿರಸ್ಕರಿಸಿ ಬಂದರೆ ವೇತನದ ಬಗ್ಗೆ ಮಾತನಾಡುವುದಾಗಿ ಕಂಪನಿ ಹೇಳುತ್ತಿದೆ. ಆದ್ದರಿಂದ ಒಪ್ಪಂದದ ಪ್ರಕಾರ ವೇತನ ನೀಡುವಂತೆ ಕಾರ್ಮಿಕ ಆಯುಕ್ತರ ಮೂಲಕ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಕಂಪನಿಯಲ್ಲಿ ೬ ವರ್ಷಕ್ಕೂ ಹೆಚ್ಚು ಅವಧಿಯ ತರಬೇತಿ ಪೂರೈಸಿ ಖಾಯಂಗೆ ೨೦ಕ್ಕೂ ಹೆಚ್ಚು ಕಾರ್ಮಿಕರು ಕಾಯುತ್ತಿದ್ದಾರೆ. ಹೊರಗುತ್ತಿಗೆ ಕಾರ್ಮಿಕರಿಗೆ ಯಾವುದೇ ಕನಿಷ್ಟ ಸೌಲಭ್ಯಗಳನ್ನು ನೀಡದೆ ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದರೂ ಕಂಪನಿ ಆಡಳಿತ ವರ್ಗವು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಕಂಪನಿಗಳ ಇತರೆ ಘಟಕಗಳಲ್ಲಿ ನೀಡಿರುವಂತೆ ಎಲ್ಲಾ ಕಾರ್ಮಿಕರಿಗೆ ವಸತಿ ಸೌಕರ್ಯ ನೀಡಬೇಕು, ಅಲ್ಲಿಯವರೆಗೂ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮನೆ ಬಾಡಿಗೆ ಭತ್ಯೆ ನೀಡಬೇಕು. ದೂರದಿಂದ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಕಂಪನಿಯಿಂದ
ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕಾರ್ಖಾನೆಯ ಮುಂದಿನ ಎಲ್ಲಾ ಹಂತದ ನೇಮಕಾತಿಗಳಲ್ಲಿ ಸ್ಥಳೀಯರನ್ನೆ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

andolanait

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

33 mins ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

1 hour ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

1 hour ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago