ಜಿಲ್ಲೆಗಳು

ಸರ್ಕಾರದ ಆದೇಶದಂತೆ ವೇತನ ಪರಿಷ್ಕರಣೆಗೆ ಆಗ್ರಹ

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಮೆರವಣಿಗೆ ಹೊರಟ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ತಲುಪಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಣ್ಣಾರಿ ಅಮ್ಮನ್ ಸಕ್ಕರೆ ಒಟ್ಟು ೫ ಘಟಕಗಳನ್ನು ಹೊಂದಿದ್ದು ೨ ನಮ್ಮ ರಾಜ್ಯದ ಅಳಗಂಚಿ ಮತ್ತು ಕುಂತೂರುಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿನ ಕಾರ್ಮಿಕರಿಗೆ ಕಳೆದ ೫ ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ವೇತನ ಪರಿಷ್ಕರಣೆಗೆ ಕಂಪನಿಯ ಆಡಳಿತ ವರ್ಗಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ತ್ರಿಪಕ್ಷೀಯ ಒಪ್ಪಂದದ ಪ್ರಕಾರ ವೇತನ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ನಂತರ ಈ ಸರ್ಕಾರದ ಆದೇಶದಂತೆ ನಾವು ವೇತನ ಪರಿಷ್ಕರಣೆ ಮಾಡುವುದಿಲ್ಲ. ಕಂಪನಿ ನಿಯಮಗಳ ಪ್ರಕಾರ ಮಾಡುವುದಾಗಿ ಹೇಳಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ತ್ರಿಪಕ್ಷೀಯ ಒಪ್ಪಂದವನ್ನು ತಿರಸ್ಕರಿಸಿ ಬಂದರೆ ವೇತನದ ಬಗ್ಗೆ ಮಾತನಾಡುವುದಾಗಿ ಕಂಪನಿ ಹೇಳುತ್ತಿದೆ. ಆದ್ದರಿಂದ ಒಪ್ಪಂದದ ಪ್ರಕಾರ ವೇತನ ನೀಡುವಂತೆ ಕಾರ್ಮಿಕ ಆಯುಕ್ತರ ಮೂಲಕ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಕಂಪನಿಯಲ್ಲಿ ೬ ವರ್ಷಕ್ಕೂ ಹೆಚ್ಚು ಅವಧಿಯ ತರಬೇತಿ ಪೂರೈಸಿ ಖಾಯಂಗೆ ೨೦ಕ್ಕೂ ಹೆಚ್ಚು ಕಾರ್ಮಿಕರು ಕಾಯುತ್ತಿದ್ದಾರೆ. ಹೊರಗುತ್ತಿಗೆ ಕಾರ್ಮಿಕರಿಗೆ ಯಾವುದೇ ಕನಿಷ್ಟ ಸೌಲಭ್ಯಗಳನ್ನು ನೀಡದೆ ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದರೂ ಕಂಪನಿ ಆಡಳಿತ ವರ್ಗವು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಕಂಪನಿಗಳ ಇತರೆ ಘಟಕಗಳಲ್ಲಿ ನೀಡಿರುವಂತೆ ಎಲ್ಲಾ ಕಾರ್ಮಿಕರಿಗೆ ವಸತಿ ಸೌಕರ್ಯ ನೀಡಬೇಕು, ಅಲ್ಲಿಯವರೆಗೂ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮನೆ ಬಾಡಿಗೆ ಭತ್ಯೆ ನೀಡಬೇಕು. ದೂರದಿಂದ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಕಂಪನಿಯಿಂದ
ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕಾರ್ಖಾನೆಯ ಮುಂದಿನ ಎಲ್ಲಾ ಹಂತದ ನೇಮಕಾತಿಗಳಲ್ಲಿ ಸ್ಥಳೀಯರನ್ನೆ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago