ಜಿಲ್ಲೆಗಳು

ನೀರು ಪೂರೈಕೆಗೆ ಒತ್ತಾಯ : ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ

ಚಾಮರಾಜನಗರ: ನಗರದ 16ನೇ ವಾರ್ಡ್‌ಗೆ ಸೇರಿದ ರೈಲ್ವೆ ಬಡಾವಣೆಯ ನಾಯಕರ ಬೀದಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಬೀದಿಯ ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು.
ಬೀದಿಯಲ್ಲಿ ಜಮಾಯಿಸಿದ ನಿವಾಸಿಗಳು ನಗರಸಭೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿದರು.
ಕಳೆದ 10 ವರ್ಷಗಳಿಂದ ಬೀದಿಯ 30ಕ್ಕೂ ಹೆಚ್ಚು ಮನೆಗಳಿಗೆ ಕಾವೇರಿ ಕುಡಿಯುವ ನೀರು ಬರುತ್ತಿಲ್ಲ. ಈ ಬಗ್ಗೆ ನಗರಸಭೆ ಪೌರಾಯುಕ್ತ, ಜಿಲ್ಲಾಧಿಕಾರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಕಳೆದ ಒಂದು ತಿಂಗಳು ನೀರಿನ ಪೈಪ್‌ಲೈನ್ ಅಳವಡಿಸಿದ್ದು, ನೀರು ಮಾತ್ರ ಬಿಟ್ಟಿಲ್ಲ. ಬೀದಿಯಲ್ಲಿರುವ ಬೋರ್ ನೀರು ಕುಡಿಯುತ್ತಾ ಬರಲಾಗಿದೆ. ಕಳೆದ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಅಪಾರ ಮಳೆ ಬಿದ್ದ ಕಾರಣ ಬೋರ್ ನೀರು ಕಲುಷಿತವಾಗಿದೆ. ಆ ನೀರನ್ನು ಕುಡಿದರೆ ಗಂಟಲು, ಮೈಕೈ ಕೆರೆತ, ಜ್ವರ ಬರುತ್ತಿದೆ. ಕೂಡಲೇ ಬೀದಿಗೆ ಕಾವೇರಿ ನೀರು ಪೂರೈಕೆ ಮಾಡಬೇಕು. ಇಲ್ಲದಿದ್ದರೆ ನಗರಸಭೆ ಕಚೇರಿಗೆ ನಿವಾಸಿಗಳೊಂದಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬುಲೆಟ್ ಚಂದ್ರು, ನಿವೃತ್ತ ಪೊಲೀಸ್ ವೆಂಕಟೇಶ್, ಸಿದ್ದರಾಜು, ರಾಜಣ್ಣ, ಕಾಳಶಟ್ಟಿ, ಚಿನ್ನಸ್ವಾಮಿ, ಕಾಳನಾಯಕ, ಮಹದೇವನಾಯಕ, ಸೂರಿ, ಕುಮಾರ್, ಗೌರಮ್ಮ, ರಾಜಮ್ಮ, ರೇಖಾ, ಸುಂದ್ರಮ್ಮ, ಚಂದ್ರಮ್ಮ ಇತರರಿದ್ದರು.

andolanait

Recent Posts

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

2 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

8 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

11 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

13 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

16 mins ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

56 mins ago