ಚಾಮರಾಜನಗರ: ನಗರದ 16ನೇ ವಾರ್ಡ್ಗೆ ಸೇರಿದ ರೈಲ್ವೆ ಬಡಾವಣೆಯ ನಾಯಕರ ಬೀದಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಬೀದಿಯ ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
ಬೀದಿಯಲ್ಲಿ ಜಮಾಯಿಸಿದ ನಿವಾಸಿಗಳು ನಗರಸಭೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿದರು.
ಕಳೆದ 10 ವರ್ಷಗಳಿಂದ ಬೀದಿಯ 30ಕ್ಕೂ ಹೆಚ್ಚು ಮನೆಗಳಿಗೆ ಕಾವೇರಿ ಕುಡಿಯುವ ನೀರು ಬರುತ್ತಿಲ್ಲ. ಈ ಬಗ್ಗೆ ನಗರಸಭೆ ಪೌರಾಯುಕ್ತ, ಜಿಲ್ಲಾಧಿಕಾರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಕಳೆದ ಒಂದು ತಿಂಗಳು ನೀರಿನ ಪೈಪ್ಲೈನ್ ಅಳವಡಿಸಿದ್ದು, ನೀರು ಮಾತ್ರ ಬಿಟ್ಟಿಲ್ಲ. ಬೀದಿಯಲ್ಲಿರುವ ಬೋರ್ ನೀರು ಕುಡಿಯುತ್ತಾ ಬರಲಾಗಿದೆ. ಕಳೆದ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಅಪಾರ ಮಳೆ ಬಿದ್ದ ಕಾರಣ ಬೋರ್ ನೀರು ಕಲುಷಿತವಾಗಿದೆ. ಆ ನೀರನ್ನು ಕುಡಿದರೆ ಗಂಟಲು, ಮೈಕೈ ಕೆರೆತ, ಜ್ವರ ಬರುತ್ತಿದೆ. ಕೂಡಲೇ ಬೀದಿಗೆ ಕಾವೇರಿ ನೀರು ಪೂರೈಕೆ ಮಾಡಬೇಕು. ಇಲ್ಲದಿದ್ದರೆ ನಗರಸಭೆ ಕಚೇರಿಗೆ ನಿವಾಸಿಗಳೊಂದಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬುಲೆಟ್ ಚಂದ್ರು, ನಿವೃತ್ತ ಪೊಲೀಸ್ ವೆಂಕಟೇಶ್, ಸಿದ್ದರಾಜು, ರಾಜಣ್ಣ, ಕಾಳಶಟ್ಟಿ, ಚಿನ್ನಸ್ವಾಮಿ, ಕಾಳನಾಯಕ, ಮಹದೇವನಾಯಕ, ಸೂರಿ, ಕುಮಾರ್, ಗೌರಮ್ಮ, ರಾಜಮ್ಮ, ರೇಖಾ, ಸುಂದ್ರಮ್ಮ, ಚಂದ್ರಮ್ಮ ಇತರರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…