ಜಿಲ್ಲೆಗಳು

ನೀರು ಪೂರೈಕೆಗೆ ಒತ್ತಾಯ : ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ

ಚಾಮರಾಜನಗರ: ನಗರದ 16ನೇ ವಾರ್ಡ್‌ಗೆ ಸೇರಿದ ರೈಲ್ವೆ ಬಡಾವಣೆಯ ನಾಯಕರ ಬೀದಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಬೀದಿಯ ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು.
ಬೀದಿಯಲ್ಲಿ ಜಮಾಯಿಸಿದ ನಿವಾಸಿಗಳು ನಗರಸಭೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿದರು.
ಕಳೆದ 10 ವರ್ಷಗಳಿಂದ ಬೀದಿಯ 30ಕ್ಕೂ ಹೆಚ್ಚು ಮನೆಗಳಿಗೆ ಕಾವೇರಿ ಕುಡಿಯುವ ನೀರು ಬರುತ್ತಿಲ್ಲ. ಈ ಬಗ್ಗೆ ನಗರಸಭೆ ಪೌರಾಯುಕ್ತ, ಜಿಲ್ಲಾಧಿಕಾರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಕಳೆದ ಒಂದು ತಿಂಗಳು ನೀರಿನ ಪೈಪ್‌ಲೈನ್ ಅಳವಡಿಸಿದ್ದು, ನೀರು ಮಾತ್ರ ಬಿಟ್ಟಿಲ್ಲ. ಬೀದಿಯಲ್ಲಿರುವ ಬೋರ್ ನೀರು ಕುಡಿಯುತ್ತಾ ಬರಲಾಗಿದೆ. ಕಳೆದ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಅಪಾರ ಮಳೆ ಬಿದ್ದ ಕಾರಣ ಬೋರ್ ನೀರು ಕಲುಷಿತವಾಗಿದೆ. ಆ ನೀರನ್ನು ಕುಡಿದರೆ ಗಂಟಲು, ಮೈಕೈ ಕೆರೆತ, ಜ್ವರ ಬರುತ್ತಿದೆ. ಕೂಡಲೇ ಬೀದಿಗೆ ಕಾವೇರಿ ನೀರು ಪೂರೈಕೆ ಮಾಡಬೇಕು. ಇಲ್ಲದಿದ್ದರೆ ನಗರಸಭೆ ಕಚೇರಿಗೆ ನಿವಾಸಿಗಳೊಂದಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬುಲೆಟ್ ಚಂದ್ರು, ನಿವೃತ್ತ ಪೊಲೀಸ್ ವೆಂಕಟೇಶ್, ಸಿದ್ದರಾಜು, ರಾಜಣ್ಣ, ಕಾಳಶಟ್ಟಿ, ಚಿನ್ನಸ್ವಾಮಿ, ಕಾಳನಾಯಕ, ಮಹದೇವನಾಯಕ, ಸೂರಿ, ಕುಮಾರ್, ಗೌರಮ್ಮ, ರಾಜಮ್ಮ, ರೇಖಾ, ಸುಂದ್ರಮ್ಮ, ಚಂದ್ರಮ್ಮ ಇತರರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago