ಜಿಲ್ಲೆಗಳು

ಪ್ರಜಾಪ್ರಭುತ್ವಕ್ಕಾಗಿ ಒಂದು ಗಂಟೆ..

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ

ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ‘ ‘ ‘ಪ್ರಜಾಪ್ರಭುತ್ವಕ್ಕಾಗಿ ಒಂದು ಯುವ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ‘ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ನೇಮಕಗೊಂಡ ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಯುವ ಮತದಾರರ ನೋಂದಣಿಯಾಗಿರುವ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರ್ಹ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಲು ಹಾಗೂ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕಾಗಿರುತ್ತದೆ. ಈ ಸಂಬಂಧ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇರುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಪದವಿ ಪೂರ್ವ ಮಟ್ಟದ ಎಲ್ಲಾ ಕಾಲೇಜುಗಳಲ್ಲಿ, ಎಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ, ಡೆಂಟಲ್ ಕಾಲೇಜು, ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜು ಹಾಗೂ ಇಲಾಖೆಯ ಎಲ್ಲಾ ಹಾಸ್ಟೆಲ್‌ಗಳ ಮೂಲಕ ಅರ್ಹ ಯುವ ಮತದಾರರ ನೋಂದಣಿಗೆ ಮತ್ತು ಮಾನ್ಯ ಭಾರತ ಚುನಾವಣಾ ಆಯೋಗವು ಕಲ್ಪಿಸಿರುವ ಅವಕಾಶದಂತೆ 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸಲು ಕಲ್ಪಸಿರುವ ಸೌಲಭ್ಯದಂತೆ ನೋಂದಣಿ ಮಾಡಿಸಲು ಪ್ರಜಾ ಪ್ರಭುತ್ವಕ್ಕಾಗಿ ಒಂದು ಗಂಟೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯುವ ಮತದಾರರು ತಮ್ಮು ನೋಂದಣಿ ಮಾಡಿಕೊಳ್ಳಲು ಮೊಬೈಲ್‌ಗಳಲ್ಲಿ ವೋಟರ್ಸ್ ಹೆಲ್ಪ್ಲೈನ್ ಆಪ್ (VHA) ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸೌಲಭ್ಯವನ್ನು ಯುವ ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ವಿಶೇಷ ಅಭೀಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥಸ್ವಾಮಿ, ಚುನಾವಣಾ ತಹಶೀಲ್ದಾರ್ ರಾಮ್‌ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago