ಜಿಲ್ಲೆಗಳು

ಪ್ರಜಾಪ್ರಭುತ್ವಕ್ಕಾಗಿ ಒಂದು ಗಂಟೆ..

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ

ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ‘ ‘ ‘ಪ್ರಜಾಪ್ರಭುತ್ವಕ್ಕಾಗಿ ಒಂದು ಯುವ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ‘ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ನೇಮಕಗೊಂಡ ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಯುವ ಮತದಾರರ ನೋಂದಣಿಯಾಗಿರುವ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರ್ಹ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಲು ಹಾಗೂ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕಾಗಿರುತ್ತದೆ. ಈ ಸಂಬಂಧ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇರುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಪದವಿ ಪೂರ್ವ ಮಟ್ಟದ ಎಲ್ಲಾ ಕಾಲೇಜುಗಳಲ್ಲಿ, ಎಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ, ಡೆಂಟಲ್ ಕಾಲೇಜು, ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜು ಹಾಗೂ ಇಲಾಖೆಯ ಎಲ್ಲಾ ಹಾಸ್ಟೆಲ್‌ಗಳ ಮೂಲಕ ಅರ್ಹ ಯುವ ಮತದಾರರ ನೋಂದಣಿಗೆ ಮತ್ತು ಮಾನ್ಯ ಭಾರತ ಚುನಾವಣಾ ಆಯೋಗವು ಕಲ್ಪಿಸಿರುವ ಅವಕಾಶದಂತೆ 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸಲು ಕಲ್ಪಸಿರುವ ಸೌಲಭ್ಯದಂತೆ ನೋಂದಣಿ ಮಾಡಿಸಲು ಪ್ರಜಾ ಪ್ರಭುತ್ವಕ್ಕಾಗಿ ಒಂದು ಗಂಟೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯುವ ಮತದಾರರು ತಮ್ಮು ನೋಂದಣಿ ಮಾಡಿಕೊಳ್ಳಲು ಮೊಬೈಲ್‌ಗಳಲ್ಲಿ ವೋಟರ್ಸ್ ಹೆಲ್ಪ್ಲೈನ್ ಆಪ್ (VHA) ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸೌಲಭ್ಯವನ್ನು ಯುವ ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ವಿಶೇಷ ಅಭೀಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥಸ್ವಾಮಿ, ಚುನಾವಣಾ ತಹಶೀಲ್ದಾರ್ ರಾಮ್‌ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago