ಜಿಲ್ಲೆಗಳು

ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ!

ಮೈಸೂರು : ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈ ಕಾರ್ಯ ನಡೆಯಲಿದೆ.

ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ಚುನಾವಣಾ ಶಿರಸ್ತೇದಾರ್ ಸುರೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

11 mins ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

17 mins ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

36 mins ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

1 hour ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

2 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 hours ago