ಜಿಲ್ಲೆಗಳು

ಒಂದು ವಾರ ಮೈಸೂರಿನಲ್ಲಿ ದಟ್ಟ ಮಂಜು, ಚಳಿ

ಹವಾಮಾನ ಇಲಾಖೆ ಮುನ್ಸೂಚನೆ

ಗುರುವಾರ-14 ಡಿ.ಸೆ.
ಶುಕ್ರವಾರ-15ಡಿ.ಸೆ.
ಶನಿವಾರ-15 ಡಿ.ಸೆ.
ಭಾನುವಾರ- 16 ಡಿ.ಸೆ.

ಮೈಸೂರು: ಸಾಂಸ್ಕೃತಿಕ ರಾಜಧಾನಿಯಲ್ಲಿ ಅತ್ಯಂತ ಕನಿಷ್ಠ ತಾಪಮಾನ ವರದಿಯಾದ ಬೆನ್ನಲ್ಲೆ ಇದೀಗ ಚಳಿ ಜೊತೆಗೆ ತೀವ್ರ ಮಂಜಿನ ವಾತಾವರಣ ಮೈಸೂರಿನ ಬಹುತೇಕ ಕಡೆಗಳಲ್ಲಿ ಬೆಳಗಿನ ವೇಳೆ ಒಂದು ವಾರ ಪೂರ್ತಿ ಕಂಡು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎರಡು ದಿನ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಉಳಿದ ಕೆಲವು ಭಾಗಗಳಲ್ಲಿ ಮಂಜು ದಟ್ಟವಾಗಿತ್ತು. ಈ ಚಳಿ ಹಾಗೂ ಮಂಜು ಕವಿದ ವಾತಾವರಣ ಈ ವಾರಾಂತ್ಯದವರೆಗೂ ಮುಂದುವರಿಯಲಿದೆ. ಈ ವೇಳೆ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ತಾಪಮಾನ ಕನಿಷ್ಠ 14ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ಕೆಲವು ದಿನಗಳಿಂದ ನಿರ್ಮಲ, ಸ್ಪಷ್ಟ ಆಕಾಶವಿದ್ದು, ಮಾರುತಗಳು ಇಲ್ಲವಾಗಿದೆ. ಇದು ಭೂಮಿ ತಾಪಮಾನ ಬೇಗ ಕಡಿಮೆಯಾಗಲು ಸಹಾಯವಾಗುತ್ತದೆ. ಇದರಿಂದಲೇ ತಂಪು ವಾತಾವರಣ ಬೇಗ ಪಸರುತ್ತದೆ. ನಗರದ ಕೆಲವೆಡೆ ದಟ್ಟ ಮಂಜು, ಇನ್ನು ಹಲವೆಡೆ ಮಧ್ಯಮ ಪ್ರಮಾಣದಲ್ಲಿ ಮಂಜು ಕಂಡು ಬರುತ್ತಿದೆ. ಜನರು ಭಾನುವಾರದಿಂದ ದಿಢೀರ್ ಹೆಚ್ಚಾದ ಈ ಚಳಿಗೆ ತತ್ತರಿಸಿದ್ದಾರೆ. ಆರೋಗ್ಯ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.
ಈ ವಾರದ ತಾಪಮಾನದ ಅಂಕಿ ಅಂಶಗಳನ್ನು ನೋಡುವುದಾದರೆ ಗುರುವಾರ ಮತ್ತು ಶುಕ್ರವಾರ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಶನಿವಾರ 15 ಡಿಗ್ರಿ ಸೆಲ್ಸಿಯಸ್, ಭಾನುವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತದೆ. ಈ ಸಂದರ್ಭದಲ್ಲಿ ಗರಿಷ್ಠ ತಾಪಮಾನ ಎಲ್ಲ ಭಾಗದಲ್ಲೂ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಈ ಕನಿಷ್ಠ ತಾಪಮಾನವು ಹೀಗೆ ಮುಂದುವರಿದಿದ್ದೇ ಆದಲ್ಲಿ ಮುಂದಿನ ವಾರವು ನಗರ ನಿವಾಸಿಗಳಿಗೆ ಚಳಿ ಸಂಕಷ್ಟ ಎದುರಾಗಲಿದೆ.

ಎರಡು ದಿನ ಅತ್ಯಧಿಕ ಮಂಜು
ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ (ಜ.20) ಮತ್ತು ಶನಿವಾರ (21)ರಂದು ಭಾರಿ ಪ್ರವಾಣದಲ್ಲಿ ಮಂಜು ಆವರಿಸಲಿದೆ ಎಂದು ಭಾರತೀಯ ಹವಾಮಾಣ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ. ಎರಡು ದಿನ ಬೆಳಿಗ್ಗೆ ವಿಪರೀತ ಮಂಜು ಬೀಳಲಿದೆ. 10ಅಡಿ ದೂರದ ವ್ಯಕ್ತಿ ಕಾಣದಷ್ಟು ತೀವ್ರ ಮಂಜು ಆವರಿಸಲಿದೆ. ಜನರು ಈ ವೇಳೆ ಬೆಚ್ಚಗಿನ ಧಿರಿಸು ಧರಿಸುವ ಮೂಲಕ ಆರೊಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

1 hour ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

1 hour ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

3 hours ago