ಹವಾಮಾನ ಇಲಾಖೆ ಮುನ್ಸೂಚನೆ
ಗುರುವಾರ-14 ಡಿ.ಸೆ.
ಶುಕ್ರವಾರ-15ಡಿ.ಸೆ.
ಶನಿವಾರ-15 ಡಿ.ಸೆ.
ಭಾನುವಾರ- 16 ಡಿ.ಸೆ.
ಮೈಸೂರು: ಸಾಂಸ್ಕೃತಿಕ ರಾಜಧಾನಿಯಲ್ಲಿ ಅತ್ಯಂತ ಕನಿಷ್ಠ ತಾಪಮಾನ ವರದಿಯಾದ ಬೆನ್ನಲ್ಲೆ ಇದೀಗ ಚಳಿ ಜೊತೆಗೆ ತೀವ್ರ ಮಂಜಿನ ವಾತಾವರಣ ಮೈಸೂರಿನ ಬಹುತೇಕ ಕಡೆಗಳಲ್ಲಿ ಬೆಳಗಿನ ವೇಳೆ ಒಂದು ವಾರ ಪೂರ್ತಿ ಕಂಡು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎರಡು ದಿನ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಉಳಿದ ಕೆಲವು ಭಾಗಗಳಲ್ಲಿ ಮಂಜು ದಟ್ಟವಾಗಿತ್ತು. ಈ ಚಳಿ ಹಾಗೂ ಮಂಜು ಕವಿದ ವಾತಾವರಣ ಈ ವಾರಾಂತ್ಯದವರೆಗೂ ಮುಂದುವರಿಯಲಿದೆ. ಈ ವೇಳೆ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ತಾಪಮಾನ ಕನಿಷ್ಠ 14ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ಕೆಲವು ದಿನಗಳಿಂದ ನಿರ್ಮಲ, ಸ್ಪಷ್ಟ ಆಕಾಶವಿದ್ದು, ಮಾರುತಗಳು ಇಲ್ಲವಾಗಿದೆ. ಇದು ಭೂಮಿ ತಾಪಮಾನ ಬೇಗ ಕಡಿಮೆಯಾಗಲು ಸಹಾಯವಾಗುತ್ತದೆ. ಇದರಿಂದಲೇ ತಂಪು ವಾತಾವರಣ ಬೇಗ ಪಸರುತ್ತದೆ. ನಗರದ ಕೆಲವೆಡೆ ದಟ್ಟ ಮಂಜು, ಇನ್ನು ಹಲವೆಡೆ ಮಧ್ಯಮ ಪ್ರಮಾಣದಲ್ಲಿ ಮಂಜು ಕಂಡು ಬರುತ್ತಿದೆ. ಜನರು ಭಾನುವಾರದಿಂದ ದಿಢೀರ್ ಹೆಚ್ಚಾದ ಈ ಚಳಿಗೆ ತತ್ತರಿಸಿದ್ದಾರೆ. ಆರೋಗ್ಯ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.
ಈ ವಾರದ ತಾಪಮಾನದ ಅಂಕಿ ಅಂಶಗಳನ್ನು ನೋಡುವುದಾದರೆ ಗುರುವಾರ ಮತ್ತು ಶುಕ್ರವಾರ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಶನಿವಾರ 15 ಡಿಗ್ರಿ ಸೆಲ್ಸಿಯಸ್, ಭಾನುವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತದೆ. ಈ ಸಂದರ್ಭದಲ್ಲಿ ಗರಿಷ್ಠ ತಾಪಮಾನ ಎಲ್ಲ ಭಾಗದಲ್ಲೂ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಈ ಕನಿಷ್ಠ ತಾಪಮಾನವು ಹೀಗೆ ಮುಂದುವರಿದಿದ್ದೇ ಆದಲ್ಲಿ ಮುಂದಿನ ವಾರವು ನಗರ ನಿವಾಸಿಗಳಿಗೆ ಚಳಿ ಸಂಕಷ್ಟ ಎದುರಾಗಲಿದೆ.
ಎರಡು ದಿನ ಅತ್ಯಧಿಕ ಮಂಜು
ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ (ಜ.20) ಮತ್ತು ಶನಿವಾರ (21)ರಂದು ಭಾರಿ ಪ್ರವಾಣದಲ್ಲಿ ಮಂಜು ಆವರಿಸಲಿದೆ ಎಂದು ಭಾರತೀಯ ಹವಾಮಾಣ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ. ಎರಡು ದಿನ ಬೆಳಿಗ್ಗೆ ವಿಪರೀತ ಮಂಜು ಬೀಳಲಿದೆ. 10ಅಡಿ ದೂರದ ವ್ಯಕ್ತಿ ಕಾಣದಷ್ಟು ತೀವ್ರ ಮಂಜು ಆವರಿಸಲಿದೆ. ಜನರು ಈ ವೇಳೆ ಬೆಚ್ಚಗಿನ ಧಿರಿಸು ಧರಿಸುವ ಮೂಲಕ ಆರೊಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…