ಹವಾಮಾನ ಇಲಾಖೆ ಮುನ್ಸೂಚನೆ
ಗುರುವಾರ-14 ಡಿ.ಸೆ.
ಶುಕ್ರವಾರ-15ಡಿ.ಸೆ.
ಶನಿವಾರ-15 ಡಿ.ಸೆ.
ಭಾನುವಾರ- 16 ಡಿ.ಸೆ.
ಮೈಸೂರು: ಸಾಂಸ್ಕೃತಿಕ ರಾಜಧಾನಿಯಲ್ಲಿ ಅತ್ಯಂತ ಕನಿಷ್ಠ ತಾಪಮಾನ ವರದಿಯಾದ ಬೆನ್ನಲ್ಲೆ ಇದೀಗ ಚಳಿ ಜೊತೆಗೆ ತೀವ್ರ ಮಂಜಿನ ವಾತಾವರಣ ಮೈಸೂರಿನ ಬಹುತೇಕ ಕಡೆಗಳಲ್ಲಿ ಬೆಳಗಿನ ವೇಳೆ ಒಂದು ವಾರ ಪೂರ್ತಿ ಕಂಡು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎರಡು ದಿನ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಉಳಿದ ಕೆಲವು ಭಾಗಗಳಲ್ಲಿ ಮಂಜು ದಟ್ಟವಾಗಿತ್ತು. ಈ ಚಳಿ ಹಾಗೂ ಮಂಜು ಕವಿದ ವಾತಾವರಣ ಈ ವಾರಾಂತ್ಯದವರೆಗೂ ಮುಂದುವರಿಯಲಿದೆ. ಈ ವೇಳೆ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ತಾಪಮಾನ ಕನಿಷ್ಠ 14ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ಕೆಲವು ದಿನಗಳಿಂದ ನಿರ್ಮಲ, ಸ್ಪಷ್ಟ ಆಕಾಶವಿದ್ದು, ಮಾರುತಗಳು ಇಲ್ಲವಾಗಿದೆ. ಇದು ಭೂಮಿ ತಾಪಮಾನ ಬೇಗ ಕಡಿಮೆಯಾಗಲು ಸಹಾಯವಾಗುತ್ತದೆ. ಇದರಿಂದಲೇ ತಂಪು ವಾತಾವರಣ ಬೇಗ ಪಸರುತ್ತದೆ. ನಗರದ ಕೆಲವೆಡೆ ದಟ್ಟ ಮಂಜು, ಇನ್ನು ಹಲವೆಡೆ ಮಧ್ಯಮ ಪ್ರಮಾಣದಲ್ಲಿ ಮಂಜು ಕಂಡು ಬರುತ್ತಿದೆ. ಜನರು ಭಾನುವಾರದಿಂದ ದಿಢೀರ್ ಹೆಚ್ಚಾದ ಈ ಚಳಿಗೆ ತತ್ತರಿಸಿದ್ದಾರೆ. ಆರೋಗ್ಯ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.
ಈ ವಾರದ ತಾಪಮಾನದ ಅಂಕಿ ಅಂಶಗಳನ್ನು ನೋಡುವುದಾದರೆ ಗುರುವಾರ ಮತ್ತು ಶುಕ್ರವಾರ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಶನಿವಾರ 15 ಡಿಗ್ರಿ ಸೆಲ್ಸಿಯಸ್, ಭಾನುವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತದೆ. ಈ ಸಂದರ್ಭದಲ್ಲಿ ಗರಿಷ್ಠ ತಾಪಮಾನ ಎಲ್ಲ ಭಾಗದಲ್ಲೂ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಈ ಕನಿಷ್ಠ ತಾಪಮಾನವು ಹೀಗೆ ಮುಂದುವರಿದಿದ್ದೇ ಆದಲ್ಲಿ ಮುಂದಿನ ವಾರವು ನಗರ ನಿವಾಸಿಗಳಿಗೆ ಚಳಿ ಸಂಕಷ್ಟ ಎದುರಾಗಲಿದೆ.
ಎರಡು ದಿನ ಅತ್ಯಧಿಕ ಮಂಜು
ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ (ಜ.20) ಮತ್ತು ಶನಿವಾರ (21)ರಂದು ಭಾರಿ ಪ್ರವಾಣದಲ್ಲಿ ಮಂಜು ಆವರಿಸಲಿದೆ ಎಂದು ಭಾರತೀಯ ಹವಾಮಾಣ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ. ಎರಡು ದಿನ ಬೆಳಿಗ್ಗೆ ವಿಪರೀತ ಮಂಜು ಬೀಳಲಿದೆ. 10ಅಡಿ ದೂರದ ವ್ಯಕ್ತಿ ಕಾಣದಷ್ಟು ತೀವ್ರ ಮಂಜು ಆವರಿಸಲಿದೆ. ಜನರು ಈ ವೇಳೆ ಬೆಚ್ಚಗಿನ ಧಿರಿಸು ಧರಿಸುವ ಮೂಲಕ ಆರೊಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…