ಜಿಲ್ಲೆಗಳು

ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಮ್ಯೂಸಿಕ್ ಚೇರ್ ಆಟ : ಗೇಟ್‌ಪಾಸ್ ಸಿಕ್ಕಿದ್ದಾದರೂ ಯಾರಿಗೆ ?

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ.
ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಗೊಂದಲ ಮುಂದುವರೆಯಲಿದೆ.
ಪೈಪೋಟಿ: ಉಮೇಶ್ ಅವರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಆದರೆ ಸೆ.೫ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಗಕ್ಕೆ ಬೆಂಗಳೂರಿನ ಪಿಯು ಬೋರ್ಡ್ನ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.
ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರೆಯುವAತೆ ಉಮೇಶ್ ಅವರ ಪರವಾಗಿ ಸೆ.೧೯ರಂದು ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಅವರು ಕೂಡ ಮತ್ತೆ ವಾಪಸ್ ಬಂದಿದ್ದಾರೆ. ಇಬ್ಬರಿಗೂ ಆದೇಶವಿರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

5 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

8 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago