ಜಿಲ್ಲೆಗಳು

ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಮ್ಯೂಸಿಕ್ ಚೇರ್ ಆಟ : ಗೇಟ್‌ಪಾಸ್ ಸಿಕ್ಕಿದ್ದಾದರೂ ಯಾರಿಗೆ ?

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ.
ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಗೊಂದಲ ಮುಂದುವರೆಯಲಿದೆ.
ಪೈಪೋಟಿ: ಉಮೇಶ್ ಅವರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಆದರೆ ಸೆ.೫ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಗಕ್ಕೆ ಬೆಂಗಳೂರಿನ ಪಿಯು ಬೋರ್ಡ್ನ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.
ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರೆಯುವAತೆ ಉಮೇಶ್ ಅವರ ಪರವಾಗಿ ಸೆ.೧೯ರಂದು ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಅವರು ಕೂಡ ಮತ್ತೆ ವಾಪಸ್ ಬಂದಿದ್ದಾರೆ. ಇಬ್ಬರಿಗೂ ಆದೇಶವಿರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

6 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

20 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

20 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

20 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

20 hours ago