ಜಿಲ್ಲೆಗಳು

ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಮ್ಯೂಸಿಕ್ ಚೇರ್ ಆಟ : ಗೇಟ್‌ಪಾಸ್ ಸಿಕ್ಕಿದ್ದಾದರೂ ಯಾರಿಗೆ ?

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ.
ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಗೊಂದಲ ಮುಂದುವರೆಯಲಿದೆ.
ಪೈಪೋಟಿ: ಉಮೇಶ್ ಅವರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಆದರೆ ಸೆ.೫ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಗಕ್ಕೆ ಬೆಂಗಳೂರಿನ ಪಿಯು ಬೋರ್ಡ್ನ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.
ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರೆಯುವAತೆ ಉಮೇಶ್ ಅವರ ಪರವಾಗಿ ಸೆ.೧೯ರಂದು ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಅವರು ಕೂಡ ಮತ್ತೆ ವಾಪಸ್ ಬಂದಿದ್ದಾರೆ. ಇಬ್ಬರಿಗೂ ಆದೇಶವಿರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

andolanait

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

2 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

2 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

4 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

5 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

6 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

7 hours ago