Mysore
30
overcast clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಒತ್ತಡ ಮರೆತು ಆಡಿ ನಲಿದ ಆರಕ್ಷಕರು

ಮೂರು ದಿನಗಳ ಮೈಸೂರು ನಗರ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು: ದಿನವಿಡೀ ನಾನಾ ರೀತಿಯ ಒತ್ತಡಗಳಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಗಂಭೀರ ಮುಖ ಛಾಯೆಯನ್ನು ಹೊಂದಿಕೊಂಡು ಸಮಾಜದ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಪೊಲೀಸರು ತಮ್ಮ ಕುಟುಂಬದ ಸದಸ್ಯರೊಂದಿಗೆ, ಸಹ ಸಿಬ್ಬಂದಿಗಳೊಂದಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು, ವೀಕ್ಷಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.


ನ ೧೭ ರಿಂದ ೧೯ ರವರೆಗೆ ಮೂರು ದಿನಗಳ ಕಾಲ ನಡೆಯುವ ಮೈಸೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಮೈಸೂರು ನಗರಪಾಲಿಕೆ ಅಯುಕ್ತ ಲಕ್ಷ್ಮೀಕಾಂತ ರೆಡ್ಡಿ ಅವರು ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಅತ್ಯಗತ್ಯ. ಕ್ರೀಡೆಯಲ್ಲಿ ಸಾಧನೆ ಮಾಡಿ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರು ತನ್ನಿ ಎಂದರು.
ಪೊಲೀಸರು ಪ್ರತಿದಿನ ಹಲವಾರು ಒತ್ತಡಗಳ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಈ ರೀತಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ ಮತ್ತು ಕ್ರೀಡಾಕೂಟ ಕಾರ್ಯಕ್ರಮದಿಂದ ನಮ್ಮ ಎಲ್ಲಾ ಒತ್ತಡಗಳನ್ನು ಮರೆಯುವಂತೆ ಆಗಿದೆ ಎಂದರು.

ಇದೇ ಕ್ರೀಡಾಪುಟಗಳ ಪಥ ಸಂಚಲನ ನಡೆಯಿತು. ಸಿ ಎ ಅರ್, ಎನ್ ಅರ್ ,ಕೆ ಅರ್, ದೇವರಾಜ ಸಂಚಾರ ಮಹಿಳಾ ವಿಭಾಗಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಉದ್ಘಾಟನೆ ಸಂದರ್ಭದಲ್ಲಿ ಪುರುಷ 800 ಮೀ ಓಟ ಹಾಗೂ ಮಹಿಳೆಯರ 100 ಮೀ ಓಟದ ಸ್ಪರ್ಧೆ , ಹಗ್ಗ ಜಗ್ಗಾಟ, ಲಅಶ್ವದಳದ ಸಂಚಲನ  ನಡೆಯಿತು. ನಂತರ ಕ್ರೀಡಾಪಟುಗಳು ಪ್ರತಿಜ್ಣಾವಿಧಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಬಿ. ರಮೇಶ್, ಡಿಸಿಪಿಗಳಾದ ಪ್ರದೀಪ್ ಗುಂಟಿ, ಎಂ.ಎಸ್.ಗೀತಾ, ಶಿವರಾಜು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಮತ್ತಿತರರು ಭಾಗಿಯಾಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!