ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.
ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಸೋತಿ ಮೆಮೋರಿಯಲ್ ಕಪ್-೨೦೨೨’ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಬೇಕು. ಕ್ರೀಡೆ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡುತ್ತದೆ. ಹೀಗಾಗಿ ಬಾಲ್ಯದಿಂದಲೇ ಮಕ್ಕಳನ್ನು ಕ್ರೀಡಾಸಕ್ತರನ್ನಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.
ಮಹಾಬೋದಿ ಶಾಲೆಯ ಸಿಇಒ ಜಿಕ್ಮೆಟ್ ಮಾಂಗ್ದಸ್ ಜ್ಯೋತಿ ವಾತನಾಡಿ, ನಮ್ಮ ಸಂಸ್ಥೆಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಯಾವುದೇ ಕ್ರೀಡಾ ಚಟುವಟಿಕೆ ನಡೆದಿರಲಿಲ್ಲ. ಇದೀಗ ಮತ್ತೆ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ಸಿಸಿ ಗ್ರೂಪ್ ಕಮಾಂಡರ್ ಆರ್.ಆರ್.ಮೆನನ್, ಮಹಾಬೋಧಿ ಶಾಲೆಯ ಶಿಕ್ಷಣ ಸಂಯೋಜಕ ವೆಂಕಟೇಶ್ವರಲು, ಪ್ರಾಂಶುಪಾಲ ಪಿ.ಆರ್.ದ್ವಾರಕೀಶ್, ಹಿರಿಯ ಕೋಚ್ ಲುಟಾನ್ ತಾಶಿ ಇನ್ನಿತರರು ಹಾಜರಿದ್ದರು. ೨ ದಿನಗಳ ಕಾಲ ನಡೆಯುವ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…