ಜಿಲ್ಲೆಗಳು

ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ: ರಾಮಚಂದ್ರರಾಜೇ ಅರಸ್

ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.

ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಸೋತಿ ಮೆಮೋರಿಯಲ್ ಕಪ್-೨೦೨೨’ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಬೇಕು. ಕ್ರೀಡೆ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡುತ್ತದೆ. ಹೀಗಾಗಿ ಬಾಲ್ಯದಿಂದಲೇ ಮಕ್ಕಳನ್ನು ಕ್ರೀಡಾಸಕ್ತರನ್ನಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಮಹಾಬೋದಿ ಶಾಲೆಯ ಸಿಇಒ ಜಿಕ್‌ಮೆಟ್ ಮಾಂಗ್‌ದಸ್ ಜ್ಯೋತಿ ವಾತನಾಡಿ, ನಮ್ಮ ಸಂಸ್ಥೆಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಯಾವುದೇ ಕ್ರೀಡಾ ಚಟುವಟಿಕೆ ನಡೆದಿರಲಿಲ್ಲ. ಇದೀಗ ಮತ್ತೆ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಗ್ರೂಪ್ ಕಮಾಂಡರ್ ಆರ್.ಆರ್.ಮೆನನ್, ಮಹಾಬೋಧಿ ಶಾಲೆಯ ಶಿಕ್ಷಣ ಸಂಯೋಜಕ ವೆಂಕಟೇಶ್ವರಲು, ಪ್ರಾಂಶುಪಾಲ ಪಿ.ಆರ್.ದ್ವಾರಕೀಶ್, ಹಿರಿಯ ಕೋಚ್ ಲುಟಾನ್ ತಾಶಿ ಇನ್ನಿತರರು ಹಾಜರಿದ್ದರು. ೨ ದಿನಗಳ ಕಾಲ ನಡೆಯುವ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

andolana

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

7 mins ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

12 mins ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

17 mins ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

11 hours ago