ಮೈಸೂರು: ಸಾಮಾನ್ಯವಾಗಿ ಯಾವುದೇ ಹಬ್ಬ ಆಚರಣೆ ಇದ್ದರೂ, ಸ್ಥಳೀಯರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಸಹಜ. ಪ್ರವಾಸಿಗರೂ ಕೂಡ ಇಂತಹ ಸಂದರ್ಭಗಳನ್ನು ಬಳಸಿಕೊಂಡು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹಾಗೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಿನ್ನೆ (ಸೋಮವಾರ)ಯಿಂದಲೇ ಆರಂಭವಾಗಿದೆ. ಇಂದು, ನಾಳೆ ಕೂಡ ಮುಂದುವರಿಯಲಿದೆ.
ಹಾಗಾಗಿ ಸಾಮಾನ್ಯವಾಗಿ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ದಂಡು ದಾಳಿ ಇಡುವುದು ಸಾಮಾನ್ಯ ಸಂಗತಿ. ನರಕ ಚತುರ್ದಶಿ (ಅ.೨೪) ಮತ್ತು ಬಲಿಪಾಡ್ಯಮಿ (ಅ.೨೬)ರಂದು ಸರ್ಕಾರಿ ರಜೆ ನೀಡಲಾಗಿದೆ. ನಡುವೆ ಇಂದು (ಮಂಗಳವಾರ) ಒಂದು ದಿನ ಕಾರ್ಯನಿರ್ವಹಣೆ ಇದ್ದರೂ, ಬಹುತೇಕ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ ಎನ್ನಲಾಗಿದೆ. ಹಾಗಾಗಿ ಚಾಮುಂಡಿಬೆಟ್ಟಕ್ಕೆ ಪ್ರವಾಸಿಗರು ಮುಗಿಬೀಳುವ ಸಾಧ್ಯತೆ ಇತ್ತು.
ಆದರೆ, ಮಂಗಳವಾರ ಖಂಡಗ್ರಾಸ ಸೂರ್ಯಗ್ರಹಣ ನಡೆಯಲಿದ್ದು, ದೊಡ್ಡ ಸಂಖ್ಯೆಯ ಸಾರ್ವಜನಿಕರು ಮನೆಯಿಂದ ಹೊರಗೆ ಬರುವುದಕ್ಕೂ ಮನಸ್ಸು ಮಾಡಿದಂತೆ ಇರಲಿಲ್ಲ. ಹಾಗಾಗಿ ಚಾಮುಂಡಿಬೆಟ್ಟದಲ್ಲಿ ಪ್ರವಾಸಿಗರ ಸಂಖ್ಯೆಯೂ ಕ್ಷೀಣವಾಗಿತ್ತು. ಬೆಳ್ಳಂಬೆಳಿಗ್ಗೆ ಸ್ವಲ್ಪ ಜನರು ಇದ್ದರೂ, ಅದು ಗಣನೀಯ ಪ್ರಮಾಣದಲ್ಲಿ ಇರಲಿಲ್ಲ.
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…