ಮೈಸೂರು: ಸಾಮಾನ್ಯವಾಗಿ ಯಾವುದೇ ಹಬ್ಬ ಆಚರಣೆ ಇದ್ದರೂ, ಸ್ಥಳೀಯರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಸಹಜ. ಪ್ರವಾಸಿಗರೂ ಕೂಡ ಇಂತಹ ಸಂದರ್ಭಗಳನ್ನು ಬಳಸಿಕೊಂಡು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹಾಗೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಿನ್ನೆ (ಸೋಮವಾರ)ಯಿಂದಲೇ ಆರಂಭವಾಗಿದೆ. ಇಂದು, ನಾಳೆ ಕೂಡ ಮುಂದುವರಿಯಲಿದೆ.
ಹಾಗಾಗಿ ಸಾಮಾನ್ಯವಾಗಿ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ದಂಡು ದಾಳಿ ಇಡುವುದು ಸಾಮಾನ್ಯ ಸಂಗತಿ. ನರಕ ಚತುರ್ದಶಿ (ಅ.೨೪) ಮತ್ತು ಬಲಿಪಾಡ್ಯಮಿ (ಅ.೨೬)ರಂದು ಸರ್ಕಾರಿ ರಜೆ ನೀಡಲಾಗಿದೆ. ನಡುವೆ ಇಂದು (ಮಂಗಳವಾರ) ಒಂದು ದಿನ ಕಾರ್ಯನಿರ್ವಹಣೆ ಇದ್ದರೂ, ಬಹುತೇಕ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ ಎನ್ನಲಾಗಿದೆ. ಹಾಗಾಗಿ ಚಾಮುಂಡಿಬೆಟ್ಟಕ್ಕೆ ಪ್ರವಾಸಿಗರು ಮುಗಿಬೀಳುವ ಸಾಧ್ಯತೆ ಇತ್ತು.
ಆದರೆ, ಮಂಗಳವಾರ ಖಂಡಗ್ರಾಸ ಸೂರ್ಯಗ್ರಹಣ ನಡೆಯಲಿದ್ದು, ದೊಡ್ಡ ಸಂಖ್ಯೆಯ ಸಾರ್ವಜನಿಕರು ಮನೆಯಿಂದ ಹೊರಗೆ ಬರುವುದಕ್ಕೂ ಮನಸ್ಸು ಮಾಡಿದಂತೆ ಇರಲಿಲ್ಲ. ಹಾಗಾಗಿ ಚಾಮುಂಡಿಬೆಟ್ಟದಲ್ಲಿ ಪ್ರವಾಸಿಗರ ಸಂಖ್ಯೆಯೂ ಕ್ಷೀಣವಾಗಿತ್ತು. ಬೆಳ್ಳಂಬೆಳಿಗ್ಗೆ ಸ್ವಲ್ಪ ಜನರು ಇದ್ದರೂ, ಅದು ಗಣನೀಯ ಪ್ರಮಾಣದಲ್ಲಿ ಇರಲಿಲ್ಲ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…