ಜಿಲ್ಲೆಗಳು

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, ಶಿಷ್ಯನಾಗಿ ಅವರ ಹೆಸರಿನಲ್ಲಿ ನಿರ್ಮಿಸಿರುವ ಕಟ್ಟಡ ಉದ್ಘಾಟನೆ ಮಾಡುವ ಭಾಗ್ಯ ಸಿಕ್ಕಿದೆ ಎಂದರು.
ರಾಜ್ಯದ ಜನತೆ ದೇವರಾಜ ಅರಸು ಅವರನ್ನು ನೆನೆಸಿಕೊಳ್ಳಬೇಕು. ಎಂಟು ವರ್ಷ ಆಡಳಿತ ನಡೆಸಿ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಅರಸು ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕಾರ್ಯಕ್ರಮ ನೀಡಿದವರು. ಪಿರಿಯಾಪಟ್ಟಣದಲ್ಲಿ ಅವರ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಜನತೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

ಸರ್ಕಾರದ ಹಂತದಲ್ಲಿ ಕೆಲಸ ಮಾಡಿಸಿಕೊಳ್ಳುವ ಸಾಮರ್ಥ್ಯ ಮಹದೇವ್ ಅವರಿಗಿದೆ. ಕೆರೆ ತುಂಬಿಸುವ, ಮನೆಮನೆಗೆ ನಳ ಸಂಪರ್ಕ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಮಹದೇವ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಪಕ್ಷ ಯಾವುದೇ ಇರಲಿ, ಅಭಿವೃದ್ಧಿಗೆ ಕೈಜೋಡಿಸುತ್ತೇವೆ ಎಂದು ಹೇಳಿದರು.

ಶಾಸಕರಾದ ಮಹದೇವ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

2 mins ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

6 mins ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

27 mins ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

45 mins ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

1 hour ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

2 hours ago