ಜಿಲ್ಲೆಗಳು

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, ಶಿಷ್ಯನಾಗಿ ಅವರ ಹೆಸರಿನಲ್ಲಿ ನಿರ್ಮಿಸಿರುವ ಕಟ್ಟಡ ಉದ್ಘಾಟನೆ ಮಾಡುವ ಭಾಗ್ಯ ಸಿಕ್ಕಿದೆ ಎಂದರು.
ರಾಜ್ಯದ ಜನತೆ ದೇವರಾಜ ಅರಸು ಅವರನ್ನು ನೆನೆಸಿಕೊಳ್ಳಬೇಕು. ಎಂಟು ವರ್ಷ ಆಡಳಿತ ನಡೆಸಿ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಅರಸು ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕಾರ್ಯಕ್ರಮ ನೀಡಿದವರು. ಪಿರಿಯಾಪಟ್ಟಣದಲ್ಲಿ ಅವರ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಜನತೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

ಸರ್ಕಾರದ ಹಂತದಲ್ಲಿ ಕೆಲಸ ಮಾಡಿಸಿಕೊಳ್ಳುವ ಸಾಮರ್ಥ್ಯ ಮಹದೇವ್ ಅವರಿಗಿದೆ. ಕೆರೆ ತುಂಬಿಸುವ, ಮನೆಮನೆಗೆ ನಳ ಸಂಪರ್ಕ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಮಹದೇವ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಪಕ್ಷ ಯಾವುದೇ ಇರಲಿ, ಅಭಿವೃದ್ಧಿಗೆ ಕೈಜೋಡಿಸುತ್ತೇವೆ ಎಂದು ಹೇಳಿದರು.

ಶಾಸಕರಾದ ಮಹದೇವ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago