ಜಿಲ್ಲೆಗಳು

ನಂಜನಗೂಡು: ಶ್ರೀಕಂಠೇಶ್ವರ ದೇಗುಲದಲ್ಲಿ ಮಾಜಿ‌ ಪ್ರಧಾನಿ ದೇವೇಗೌಡ ದಂಪತಿ ಪೂಜೆ

ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು. ‘ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು’ ಎಂದರು.

‘ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ’ ಎಂದು ದೇವೇಗೌಡ ಹೇಳಿದರು.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago