ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.
ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು. ‘ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು’ ಎಂದರು.
‘ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ’ ಎಂದು ದೇವೇಗೌಡ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…