ಜಿಲ್ಲೆಗಳು

ನಂಜನಗೂಡು: ಶ್ರೀಕಂಠೇಶ್ವರ ದೇಗುಲದಲ್ಲಿ ಮಾಜಿ‌ ಪ್ರಧಾನಿ ದೇವೇಗೌಡ ದಂಪತಿ ಪೂಜೆ

ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು. ‘ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು’ ಎಂದರು.

‘ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ’ ಎಂದು ದೇವೇಗೌಡ ಹೇಳಿದರು.

 

andolanait

Recent Posts

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

2 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

3 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

3 hours ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

3 hours ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

3 hours ago