ಜಿಲ್ಲೆಗಳು

ದೇವಿಕೆರೆಯಲ್ಲಿ ತೆಪ್ಪೋತ್ಸವದ ಸಡಗರ

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ ನಡೆಯುವುದು ವಾಡಿಕೆ.

ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ನಾನಾ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ರಾತ್ರಿ 7.30ಕ್ಕೆ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ದೇವಾಲಯದ ಕೆಳ ಆವರಣದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಆರಾಧನೆ ವಾಡಲಾಯಿತು. 

ಸಾವಿರಾರು ಮಂದಿ ಭಕ್ತರು ಈ ಅವಿಸ್ಮರಣೀಯ ಗಳಿಗೆಯನ್ನು ಕಣ್ತುಂಬಿಕೊಂಡರು. ಮೊದಲಿಗೆ ಬೆಟ್ಟದ ದೇವಾಲಯದಲ್ಲಿರುವ ದೇವರಿಗೆ ನಮಿಸಿದ ಜನತೆ ನಂತರ ದೇವಾಲಯದ ಕೆಳ ಆವರಣದಲ್ಲಿರುವ ದೇವಿ ಕೆರೆ ಬಳಿಗೆ ತೆರಳಿ ತೆಪ್ಪೋತ್ಸವವನ್ನು ಕಂಡು ಸಂಭ್ರಮಿಸಿದರು.

ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ದೇವಿಯ ಮೂರ್ತಿಯನ್ನಿಟ್ಟು ದೇವಿಕೆರೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ನಡೆಸಲಾಯಿತು. ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಪಚ್ಚೆ ಹಾರ ಸೇರಿದಂತೆ ನಾನಾ ಆಭರಣಗಳಿಂದ ಅಲಂಕರಿಸಲಾಗಿತ್ತು.

 

ಕುಶಾಲುತೋಪು ಸಿಡಿಸಿ ದೇವಿಗೆ ಗೌರವ ಸಲ್ಲಿಸಲಾಯಿತು. ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

2 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

3 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

4 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

4 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

5 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

5 hours ago