ಜಿಲ್ಲೆಗಳು

ದೇವಿಕೆರೆಯಲ್ಲಿ ತೆಪ್ಪೋತ್ಸವದ ಸಡಗರ

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ ನಡೆಯುವುದು ವಾಡಿಕೆ.

ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ನಾನಾ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ರಾತ್ರಿ 7.30ಕ್ಕೆ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ದೇವಾಲಯದ ಕೆಳ ಆವರಣದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಆರಾಧನೆ ವಾಡಲಾಯಿತು. 

ಸಾವಿರಾರು ಮಂದಿ ಭಕ್ತರು ಈ ಅವಿಸ್ಮರಣೀಯ ಗಳಿಗೆಯನ್ನು ಕಣ್ತುಂಬಿಕೊಂಡರು. ಮೊದಲಿಗೆ ಬೆಟ್ಟದ ದೇವಾಲಯದಲ್ಲಿರುವ ದೇವರಿಗೆ ನಮಿಸಿದ ಜನತೆ ನಂತರ ದೇವಾಲಯದ ಕೆಳ ಆವರಣದಲ್ಲಿರುವ ದೇವಿ ಕೆರೆ ಬಳಿಗೆ ತೆರಳಿ ತೆಪ್ಪೋತ್ಸವವನ್ನು ಕಂಡು ಸಂಭ್ರಮಿಸಿದರು.

ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ದೇವಿಯ ಮೂರ್ತಿಯನ್ನಿಟ್ಟು ದೇವಿಕೆರೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ನಡೆಸಲಾಯಿತು. ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಪಚ್ಚೆ ಹಾರ ಸೇರಿದಂತೆ ನಾನಾ ಆಭರಣಗಳಿಂದ ಅಲಂಕರಿಸಲಾಗಿತ್ತು.

 

ಕುಶಾಲುತೋಪು ಸಿಡಿಸಿ ದೇವಿಗೆ ಗೌರವ ಸಲ್ಲಿಸಲಾಯಿತು. ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago