ಜಿಲ್ಲೆಗಳು

ದೇವಿಕೆರೆಯಲ್ಲಿ ತೆಪ್ಪೋತ್ಸವದ ಸಡಗರ

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ ನಡೆಯುವುದು ವಾಡಿಕೆ.

ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ನಾನಾ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ರಾತ್ರಿ 7.30ಕ್ಕೆ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ದೇವಾಲಯದ ಕೆಳ ಆವರಣದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಆರಾಧನೆ ವಾಡಲಾಯಿತು. 

ಸಾವಿರಾರು ಮಂದಿ ಭಕ್ತರು ಈ ಅವಿಸ್ಮರಣೀಯ ಗಳಿಗೆಯನ್ನು ಕಣ್ತುಂಬಿಕೊಂಡರು. ಮೊದಲಿಗೆ ಬೆಟ್ಟದ ದೇವಾಲಯದಲ್ಲಿರುವ ದೇವರಿಗೆ ನಮಿಸಿದ ಜನತೆ ನಂತರ ದೇವಾಲಯದ ಕೆಳ ಆವರಣದಲ್ಲಿರುವ ದೇವಿ ಕೆರೆ ಬಳಿಗೆ ತೆರಳಿ ತೆಪ್ಪೋತ್ಸವವನ್ನು ಕಂಡು ಸಂಭ್ರಮಿಸಿದರು.

ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ದೇವಿಯ ಮೂರ್ತಿಯನ್ನಿಟ್ಟು ದೇವಿಕೆರೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ನಡೆಸಲಾಯಿತು. ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಪಚ್ಚೆ ಹಾರ ಸೇರಿದಂತೆ ನಾನಾ ಆಭರಣಗಳಿಂದ ಅಲಂಕರಿಸಲಾಗಿತ್ತು.

 

ಕುಶಾಲುತೋಪು ಸಿಡಿಸಿ ದೇವಿಗೆ ಗೌರವ ಸಲ್ಲಿಸಲಾಯಿತು. ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago