ಜಿಲ್ಲೆಗಳು

ಡಿಎಫ್‌ಒ ಕಚೇರಿಗೆ ರೈತ ಸಂಘದಿಂದ ದಿಗ್ಬಂಧನ

ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು.
ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸ್ಥಳಕ್ಕೆ ಆಗಮಿಸಿ, ಮುಖ್ಯಮಂತ್ರಿಗಳು ಡಿ.೧೨ರಂದು ಮ.ಬೆಟ್ಟಕ್ಕೆ ಬರುತ್ತಿರುವುದರಿಂದ ಅಲ್ಲಿ ರೈತ ಸಂಘದ ಮುಖಂಡರಿಗೆ ಬೇಡಿಕೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಮಾಡಿಕೊಡುವುದಾಗಿ ತಿಳಿಸಿದರು. ನಂತರ ರೈತರು ದಿಗ್ಬಂಧನ ತೆರವುಗೊಳಿಸಿದರು. ಬಳಿಕ ಕಚೇರಿಯ ಸಿಬ್ಬಂದಿ ಹೊರಹೋಗಲು ಅವಕಾಶ ಕಲ್ಪಿಸಲಾಯಿತು.
ಆದರೆ ಹೋರಾಟವನ್ನು ಮುಂದುವರಿಸುವುದಾಗಿ ಬಡಗಲಪುರ ನಾಗೇಂದ್ರ ಅವರು ತಿಳಿಸಿದ್ದು, ಮುಖ್ಯಮಂತ್ರಿಯ ಭೇಟಿಯ ನಂತರ ಚಳವಳಿ ಮುಂದುವರಿಸಬೇಕೋ ಅಥವಾ ಮುಕ್ತಾಯಗೊಳಿಸಬೇಕೋ ಎಂಬುದನ್ನು ಆನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಹನೂರು ಮುಖಂಡ ಮುಜಾಮಿಲ್ ಪಾಷ, ತಾಲ್ಲೂಕು ರೈತ ಮುಖಂಡರು ಶೈಲೇಂದ್ರ, ಮಧುವನಹಳ್ಳಿ ಬಸವರಾಜಪ್ಪ, ಭಾಸ್ಕರ, ಅರೇಪಾಳ್ಯ ನಾಗರಾಜು,ಜೋಯಲ್ ನಿವಾಸ ಇತರರು ಹಾಜರಿದ್ದರು.

 

 

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago